Home ಟಾಪ್ ಸುದ್ದಿಗಳು ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿ ಬರಬಹುದು: ರಮೇಶ್ ಜಾರಕಿಹೊಳಿ

ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿ ಬರಬಹುದು: ರಮೇಶ್ ಜಾರಕಿಹೊಳಿ

ಬೆಳಗಾವಿ: ಮುಂದೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ಸಿಡಿ ಬರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.


ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಂದೆ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿ ಬರಬಹುದು. ಮೊದಲಿನಿಂದ ಸಿಡಿ ಬಗ್ಗೆ ನಾನು ಹೇಳಿಕೊಂಡೇ ಬಂದಿದ್ದೆ. ಆಗ ಎಲ್ಲರೂ ನನ್ನ ಹೇಳಿಕೆ ನಿರ್ಲಕ್ಷ್ಯ ಮಾಡುತ್ತ ಬಂದರು. ಇವತ್ತು ಒಬ್ಬರಿಗೆ ಆಗಿದೆ, ಮುಂದೆ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಡಾ.ಪರಮೇಶ್ವರ್ ಅವರಿಗೂ ಬರಬಹುದು. ದಯವಿಟ್ಟು ಸಿಎಂ, ಗೃಹಸಚಿವರು ಇತಿಶ್ರೀ ಹಾಡಬೇಕು. ಮುಖ್ಯಮಂತ್ರಿಗಳು ಪಕ್ಷಾತೀತವಾಗಿ ಇತಿಶ್ರೀ ಹಾಡಬೇಕು. ಸಿಎಂ ಅವರಿಗೆ ಕೈ ಮುಗಿದು ಕೇಳಿಕೊಳ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

Join Whatsapp
Exit mobile version