Home ಟಾಪ್ ಸುದ್ದಿಗಳು ರಾಜ್ಯಪಾಲರ ಶೋಕಾಸ್ ನೋಟಿಸ್’ಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರ ಶೋಕಾಸ್ ನೋಟಿಸ್’ಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಆರೋಪಕ್ಕೆ ಸಂಬಂಧಿಸಿ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಉತ್ತರ ನೀಡುವುದರ ಜೊತೆಗೆ ರಾಜ್ಯಪಾಲರಿಗೆ ಸಮರ್ಪಕವಾದ ದಾಖಲೆ ಸಲ್ಲಿಕೆ ಮಾಡಿದ್ದಾರೆ.


ಪ್ರತ್ಯೇಕವಾಗಿ, ವೈಯಕ್ತಿಕವಾಗಿ ದಾಖಲೆಗಳ ಸಮೇತ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರಿಗೆ ವಿವರಣೆ ನೀಡಿದ್ದಾರೆ. ತಮಗೇ ನೇರವಾಗಿ ನೋಟಿಸ್ ನೀಡಿದ ಪರಿಣಾಮ ರಾಜ್ಯಪಾಲರಿಗೆ ಖುದ್ದು ಸಿಎಂ ವಿವರಣೆ ನೀಡಿದ್ದಾರೆ. ಅಲ್ಲದೆ, ರಾಜ್ಯಪಾಲರು ನೋಟಿಸ್ ನಲ್ಲಿ ಉಲ್ಲೇಖಸಿರುವ ಆರೋಪಗಳನ್ನು ಸಿಎಂ ನಿರಾಕರಿಸಿದ್ದಾರೆ.


ಮುಡಾ ಸೈಟ್ ಹಂಚಿಕೆ ವಿಚಾರದಲ್ಲಿ ನನ್ನ ಪಾತ್ರವಿಲ್ಲ. ಯಾವುದೇ ಪ್ರಭಾವವನ್ನೂ ಬಳಸಿಲ್ಲ. ಕಾನೂನಾತ್ಮಕವಾಗಿಯೇ ಪತ್ನಿಗೆ ಸೈಟ್ ಹಂಚಿಕೆಯಾಗಿದೆ ಎಂದಿರುವ ಸಿದ್ದರಾಮಯ್ಯ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಉತ್ತರದ ಜತೆ ಕಳುಹಿಸಿಕೊಟ್ಟಿದ್ದಾರೆ.

Join Whatsapp
Exit mobile version