ಇಂದು ಕೊಡಗಿನಲ್ಲಿ ನೂತನ SP ಕಛೇರಿ ಉದ್ಘಾಟಿಸಲಿರುವ ಸಿಎಂ: ಡಿಸಿಎಂ, ಸಚಿವರು ಸಾಥ್

Prasthutha|

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆಯ ಕಾಂಗ್ರೆಸ್ ಶಾಸಕರ ಮನೆಗೆ ಭೇಟಿ ನೀಡಿದ ಬಳಿಕ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಮಡಿಕೇರಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎಸ್ಪಿ ಕಛೇರಿಯನ್ನು ಉದ್ಘಾಟಿಸಲಿದ್ದಾರೆ.

- Advertisement -

ನಂತರ ವಿರಾಜಪೇಟೆ, ಮಡಿಕೇರಿಯಲ್ಲಿ ಕಾರ್ಯಕರ್ತರ ಜೊತೆಗೆ ಮುಖ್ಯಮಂತ್ರಿ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಎನ್‌ಎಸ್ ಬೋಸರಾಜು ಸಾಥ್ ನೀಡಲಿದ್ದಾರೆ ಅದರಂತೆ ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ಹಿಂದಿರುಗಲಿದ್ದಾರೆ

Join Whatsapp