ಸಿಎಂ ಯೂಟರ್ನ್‌: ಹಿಂದುತ್ವಕ್ಕೆ ಸಿಕ್ಕ ಜಯ ಎಂದ ಈಶ್ವರಪ್ಪ

Prasthutha|

ಶಿವಮೊಗ್ಗ: ಹಿಜಾಬ್‌ ನಿಷೇಧ ಆದೇಶ ವಾಪಸ್‌ ತೆಗೆದುಕೊಳ್ಳುತ್ತೇನೆಂದು ಹೇಳಿದ ಸಿಎಂ ಈಗ ಉಲ್ಟಾ ಹೊಡೆದದ್ದು ಹಿಂದುತ್ವಕ್ಕೆ ಸಿಕ್ಕ ಜಯ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ರಾಜ್ಯದಲ್ಲಿ ಹಿಜಾಬ್ ರಾಜಕಾರಣ ಮಾಡಲು ಪ್ರಯತ್ನ ಮಾಡಿದ್ದರು ಎಂದಿದ್ದಾರೆ.

ಮುಸಲ್ಮಾನರ ಸಂತೃಪ್ತಿಪಡಿಸಿ, ರಾಜಕೀಯ ಮಾಡಲು ನೋಡಿದ್ದರು. ಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಪಡೆಯಲು ಸಿಎಂ ಹೇಳಿಕೆ ಕೊಟ್ಟಿದ್ದರು. ಆದರೆ, ಇದಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಬಂದ ಬೆದರಿಕೆಗೆ ಬೆದರಿದ ಸಿಎಂ ಉಲ್ಟಾ ಹೊಡೆದಿದ್ದಾರೆ ಎಂದರು.

Join Whatsapp