ಅನೈತಿಕ ಪೊಲೀಸ್‌ ಗಿರಿ ಸಹಿಸಲ್ಲ ಎಂದಿದ್ದ ಸಿಎಂ, ಸುರತ್ಕಲ್ ಘಟನೆಯ ಆರೋಪಿಗಳಿಗೆ ಸ್ಟೇಷನ್ ಬೇಲ್ ನೀಡಿ ಕಳುಹಿಸಿದ್ದೇಕೆ: ಕಾಂಗ್ರೆಸ್ ಪ್ರಶ್ನೆ

Prasthutha|

ಬೆಂಗಳೂರು: ಸಿಎಂ ಬೊಮ್ಮಾಯಿ ಅವರು ಅನೈತಿಕ ಪೊಲೀಸ್‌ ಗಿರಿಯನ್ನು ಸಹಿಸುವುದಿಲ್ಲ ಎಂದಿದ್ದರು, ಆದರೆ ಸುರತ್ಕಲ್‌ ನಲ್ಲಿ ಬಿಜೆಪಿಯ ಭಯೋತ್ಪಾದಕ ಪಡೆ ನಡೆಸಿದ ಅನೈತಿಕ ಪೊಲೀಸ್‌ ಗಿರಿಯ ಬಗ್ಗೆ ತುಟಿ ಬಿಚ್ಚದೆ ಆರೋಪಿಗಳಿಗೆ ಸ್ಟೇಷನ್ ಬೇಲ್ ನೀಡಿ ತಕ್ಷಣವೇ ಬಿಟ್ಟು ಕಳಿಸಿದ್ದೇಕೆ? ರಾಜ್ಯವನ್ನು ತಾಲಿಬಾನೀಕರಣ ಮಾಡಲು ಬಿಜೆಪಿ ಮುಂದಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಿದ್ದರಾಮಯ್ಯ ಅವರ ಪಂಚೆ ಆಕಸ್ಮಿಕವಾಗಿ ಕಳಚಿ ಬೀಳುವುದು ಸಹಜ, ಆದರೆ ಬಿಜೆಪಿ ನಾಯಕರು ತಮ್ಮ ಪ್ಯಾಂಟ್‌ ಅನ್ನೇ ತಾವೇ ಕಳಚುವುದು ಅಸಹ್ಯ. ಕಳಚಿದ ನಂತರ ವಿಡಿಯೋ ಮಾಡಿಕೊಳ್ಳುವುದು, ಸಿಡಿ ಬಿಡುಗಡೆಗೆ ತಡೆಯಾಜ್ಞೆ ತರುವುದು ಪರಮ ಅಸಹ್ಯ ಮುಂದೆ ನಮ್ಮ ಸರ್ಕಾರದಲ್ಲಿ ಬಿಜೆಪಿ ನಾಯಕರಿಗೆ ಕಳಚಲಾಗದ ‘ಪ್ಯಾಂಟ್ ಭಾಗ್ಯ’ ನೀಡುವೆವು ಚಿಂತಿಸಬೇಡಿ! ಎಂದು ವ್ಯಂಗ್ಯವಾಡಿದೆ.


ಪಂಚೆ ಈ ನೆಲದ ಸಂಸ್ಕೃತಿಯ ಪ್ರತೀಕ, ಶ್ರಮಜೀವಿಗಳ ಸಂಗಾತಿ, ಪಂಚೆ ಕಳಚುವುದು ಎತ್ತಿ ಕಟ್ಟುವುದೂ ಸಹಜ, ಅದೇ ಕರುನಾಡ ಮಣ್ಣಿನ ಮಕ್ಕಳ ಗತ್ತು. ಕಂಡ ಕಂಡಲ್ಲಿ ತಮ್ಮ ಪ್ಯಾಂಟ್ ಕಳಚಿ ಸಿಡಿ ಮಾಡಿಕೊಳ್ಳುವ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಅವರ ಪಂಚೆಯ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಮೊದಲು ತಮ್ಮ ಚಡ್ಡಿಯ ಲಾಡಿ ಭದ್ರಪಡಿಸಿಕೊಳ್ಳಲಿ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

Join Whatsapp