Home ಟಾಪ್ ಸುದ್ದಿಗಳು ತನಿಖೆಯಾಗಿ ತಪ್ಪು ಕಂಡುಬಂದರೆ ಸಿಎಂ ರಾಜೀನಾಮೆ ನೀಡಬೇಕಾಗುತ್ತದೆ: ಸತೀಶ್ ಜಾರಕಿಹೊಳಿ

ತನಿಖೆಯಾಗಿ ತಪ್ಪು ಕಂಡುಬಂದರೆ ಸಿಎಂ ರಾಜೀನಾಮೆ ನೀಡಬೇಕಾಗುತ್ತದೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ‘ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯದ ಎಲ್ಲ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಇದ್ದೇವೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕಾನೂನು ಹೋರಾಟ ಮಾಡುತ್ತೇವೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.


‘ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂಬ ಬಿಜೆಪಿ ಹೋರಾಟಕ್ಕೆ ಅರ್ಥವಿಲ್ಲ. ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ ಅಷ್ಟೇ. ತನಿಖೆಯಾಗಲಿ. ತಪ್ಪು ಕಂಡುಬಂದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ’ ಎಂದು ಅವರು ನಗರದಲ್ಲಿ ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.


‘ಮುಡಾ ಪ್ರಕರಣ ತನಿಖೆ ಸಮಗ್ರವಾಗಿ ಆಗಲಿ. ಅಲ್ಲಿಯವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. ಎಲ್ಲ ಶಾಸಕರದ್ದು, ಹೈಕಮಾಂಡ್ ನದ್ದು ಕೂಡ ಇದೇ ಆಗ್ರಹವಾಗಿದೆ ಎಂದರು. ಹಾಗಾಗಿ, ಯಾರೂ ಈಗ ಮುಖ್ಯಮಂತ್ರಿ ರೇಸ್ ನಲ್ಲಿ ಇಲ್ಲ. ಅದರ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Join Whatsapp
Exit mobile version