ಆನಂದ್ ಸಿಂಗ್ ಜೊತೆ ಸಿಎಂ ಶೀಘ್ರ ಮಾತುಕತೆ: ಆರ್.ಅಶೋಕ್

Prasthutha|

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಯಾವುದೇ ಅಸಮಾಧಾನವಿಲ್ಲ, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸ್ಥಿರ ಸರ್ಕಾರ ನೀಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, “ಮುಖ್ಯಮಂತ್ರಿ ಗಳು, ಆನಂದ್ ಸಿಂಗ್ ಅವರೊಂದಿಗೆ ಶೀಘ್ರದಲ್ಲೇ ಮಾತನಾಡುತ್ತಾರೆ ಮತ್ತು ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂದು ಹೇಳಿದರು.

- Advertisement -


ಆನಂದ ಸಿಂಗ್ ಮೂಲತಃ ಬಿಜೆಪಿಯವರು, ನಮ್ಮ ಪಕ್ಷದಲ್ಲೇ ಮುಂದುವರಿಯುತ್ತಾರೆ ಎಂದು ಶೇ 100 ರಷ್ಟು ವಿಶ್ವಾಸವಿದೆ. ಅವರು ನನ್ನ ಆತ್ಮೀಯ ಸ್ನೇಹಿತ. ಈಗಾಗಲೇ ಅವರೊಂದಿಗೆ ಮಾತನಾಡಿದ್ದೇನೆ” ಎಂದು ಹೇಳಿದರು. “ಹಿರಿಯೂರು ಶಾಸಕಿ ಪೂರ್ಣಿಮಾ ಅವರನ್ನು ಮನೆಗೆ ಆಹ್ವಾನಿಸಿದ್ದೆ. ಅವರೊಂದಿಗೆ ಚರ್ಚಿಸಲಾಗಿದೆ. ಪೂರ್ಣಿಮಾ ಅವರು ಸಚಿವ ಸ್ಥಾನ ಕೊಡದೆ ಇರುವುದರ ಬಗ್ಗೆ ಯಾವುದೇ ಅಸಮಾಧಾನ ಹೊಂದಿಲ್ಲ, ಬದಲಾಗಿ ಅವರ ಕ್ಷೇತ್ರದ ಬಗ್ಗೆ ಗಮನಹರಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ” ಎಂದರು.


ಪ್ರೀತಂ ಗೌಡ ಹಾಗೂ ಎಂಟಿಬಿ ನಾಗರಾಜು ಅವರೊಂದಿಗೂ ಮಾತನಾಡಿದ್ದೇನೆ. ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ದೆಹಲಿಗೆ ಭೇಟಿ ನೀಡುವ ಕೆಲವು ಶಾಸಕರನ್ನು ಪರಿಗಣಿಸಿದರೆ, ಇದು ಅವರ ಕ್ಷೇತ್ರಗಳಿಗೆ ವಿವಿಧ ಅಭಿವೃದ್ಧಿ ಕೆಲಸಗಳಿಗಾಗಿ ಹೋಗಿದ್ದಾರೆ ಹೊರತು ಲಾಬಿಗೆ ಅಲ್ಲ” ಎಂದು ತಿಳಿಸಿದರು.

Join Whatsapp