ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ: ಡಿ.ಕೆ. ಶಿವಕುಮಾರ್

Prasthutha|

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ. ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

- Advertisement -


‘ನಾನು ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿ ಎನ್ನುವ ಶಾಸಕ ಆರ್.ವಿ. ದೇಶಪಾಂಡೆ ಅವರ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಹಿರಿಯರಾದ ದೇಶಪಾಂಡೆ ಅವರು ಆಸೆ ಪಡುವುದು ತಪ್ಪಲ್ಲ. ಆದರೆ, ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೊ ಅದನ್ನು ನೀಡೋಣ’ ಎಂದರು.


‘ನ್ಯಾಯಲಯದಲ್ಲಿ ಸಿದ್ದರಾಮಯ್ಯ ವಿರುದ್ದವಾಗಿ ತೀರ್ಪು ಬಂದರೆ ಮುಂದಿನ ನಡೆ ಏನು’ ಎಂಬ ಪ್ರಶ್ನೆಗೆ, ‘ಯಾವುದೇ ವ್ಯತಿರಿಕ್ತವಾಗುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ’ ಎಂದರು.



Join Whatsapp