Home ಟಾಪ್ ಸುದ್ದಿಗಳು ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ: ಎಚ್.ಸಿ. ಮಹದೇವಪ್ಪ

ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ: ಎಚ್.ಸಿ. ಮಹದೇವಪ್ಪ

ಬೆಂಗಳೂರು: ಯಾವ ಕಾರಣಕ್ಕೂ ಮುಖ್ಯಮಂತ್ರಿ ಖುರ್ಚಿ ಖಾಲಿಯಾಗುವುದೇ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಈಗ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ. ಹೀಗಿರುವಾಗ ಯಾಕೆ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆ ಉದ್ಭವಾಗುತ್ತದೆ’ ಎಂದರು.

‘ಸಿದ್ದರಾಮಯ್ಯಗೆ ಮೊದಲಿದ್ದ ಸ್ವಾತಂತ್ರ್ಯ ಈಗ ಇದ್ದಂತಿಲ್ಲ, 2013 ಸುವರ್ಣಯುಗವಾಗಿತ್ತು ಎಂಬ ಮಾಜಿ ಸಚಿವ ಆಂಜನೇಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಅವರಿಗೆ ಯಾಕೆ ಸ್ವಾತಂತ್ರ್ಯ ಇಲ್ಲ. ಅವರು ಯಾವಾಗಲೂ ಸ್ವಾತಂತ್ರ್ಯ ಇರುವ ವ್ಯಕ್ತಿ. ಅವರು ಎಂದೂ ಸ್ವಾತಂತ್ರ್ಯ ಕಳೆದುಕೊಂಡು ಆಡಳಿತ ನಡೆಸುವುದಿಲ್ಲ. ಅವರ ಕೈ ಕಟ್ಟಿ ಹಾಕಿದಿದ್ದರೆ, ಸಹಿ ಯಾಕೆ ಹಾಕುತ್ತಾರೆ’ ಎಂದು ಪ್ರಶ್ನಿಸಿದರು.

Join Whatsapp
Exit mobile version