Home ಕರಾವಳಿ ಶ್ರೀಲಂಕಾ ನಿರಾಶ್ರಿತರು ಸಮುದ್ರ ಮೂಲಕ ನುಸುಳುವ ಸಾಧ್ಯತೆ: ಕರಾವಳಿ ಕಾವಲು ಪಡೆ ಎಚ್ಚರಿಕೆ

ಶ್ರೀಲಂಕಾ ನಿರಾಶ್ರಿತರು ಸಮುದ್ರ ಮೂಲಕ ನುಸುಳುವ ಸಾಧ್ಯತೆ: ಕರಾವಳಿ ಕಾವಲು ಪಡೆ ಎಚ್ಚರಿಕೆ

ಮಂಗಳೂರು: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಅರಾಜಕತೆ ಉಂಟಾಗಿರುವುದರಿಂದ ಅಲ್ಲಿನ ಜನ ಅಕ್ರಮವಾಗಿ ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ನುಸುಳುವ ಸಾಧ್ಯತೆ ಇದೆ. ಈ ಸಂಬಂಧ ಕರಾವಳಿ ಕಾವಲು ಪೊಲೀಸ್ ಠಾಣೆ ಎಚ್ಚರಿಕೆ ನೀಡಿದೆ.

ಶ್ರೀಲಂಕಾ ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಉಂಟಾಗಿರುವುದರಿಂದ ವಿದ್ಯುತ್​, ಔಷಧ, ಆಹಾರ ಪದಾರ್ಥಗಳಿಗಾಗಿ ಪರದಾಟ ನಡೆಯುತ್ತಿದೆ. ಅಲ್ಲಿನ ಜನರು ಕೊಲೆ, ದರೋಡೆ, ಕಲಹದಿಂದ ತತ್ತರಿಸಿದ್ದು, ಸಮುದ್ರ ಸೇರಿದಂತೆ ಇನ್ನಿತರೆ ಮಾರ್ಗಗಳ ಮೂಲಕ ಭಾರತಕ್ಕೆ ಅಕ್ರಮವಾಗಿ ನುಸುಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಾಗ್ರತೆ ವಹಿಸುವಂತೆ ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆ ತಿಳಿಸಿದೆ.

ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಸಮಯದಲ್ಲಿ ಅವರುಗಳ ಪೂರ್ವಾಪರ ಮಾಹಿತಿ ತಿಳಿದು, ಸೂಕ್ತ ದಾಖಲೆಯನ್ನು ಪಡೆದು ಕೂಡಲೇ ಪೊಲೀಸ್ ಠಾಣೆಗೆ‌ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಜೊತೆಗೆ ಕರಾವಳಿ ಪೊಲೀಸ್ ಠಾಣೆಯು ಮಂಗಳೂರಿನ ಮೀನುಗಾರರು,‌ ರಿಕ್ಷಾ ಚಾಲಕರು ಸೇರಿದಂತೆ ವಿವಿಧೆಡೆ ಎಚ್ಚರಿಕೆಯ ನೋಟಿಸ್ ನೀಡಿದೆ‌.

Join Whatsapp
Exit mobile version