ಬಿಲ್ಲವ ಮುಖಂಡರಿಗೆ ಸಿಗದ ಸಚಿವ ಸ್ಥಾನ: ಕರಾವಳಿ ಬಿಲ್ಲವ ಸಮುದಾಯ ಅಸಮಾಧಾನ

Prasthutha|

ಮಂಗಳೂರು: ಕರಾವಳಿಯ ಬಿಲ್ಲವ ಸಮುದಾಯದ ಮುಖಂಡರಿಗೆ ಸಚಿವ ಸ್ಥಾನ ಸಿಗದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಲ್ಲವ ಮುಖಂಡರು ಅಸಮಾಧಾನ ತಮ್ಮ ವ್ಯಕ್ತಪಡಿಸಿದ್ದಾರೆ.

- Advertisement -

ಈ ಬಗ್ಗೆ ಶನಿವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ಪಕ್ಷದ ನಿರ್ಧಾರದಿಂದ ಬೇಸರವಾಗಿದೆ. ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅಥವಾ ಹರೀಶ್ ಕುಮಾರ್ ಅವರಿಗೆ ಸಚಿವ ಸ್ಥಾನ ಸಿಗಬಹುದು ಎನ್ನುವ ವಿಶ್ವಾಸವಿತ್ತು. ಆದರೆ ಇಬ್ಬರನ್ನೂ ಕಡೆಗಣಿಸಲಾಗಿದೆ. ಈ ಸಂಬಂಧ ರಾಜ್ಯ ನಾಯಕರ ಜತೆ ಮಾತುಕತೆ ನಡೆಸಲಾಗಿದ್ದು, ಸೂಕ್ತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಲಾಗಿದೆ ಎಂದು ತಿಳಿಸಿದ್ದಾರೆ.

Join Whatsapp