ಹಾಸ್ಯ ಕಲಾವಿದ ವೀರ್ ದಾಸ್ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಸಂಘಪರಿವಾರ: ಶೋ ರದ್ದು

Prasthutha|

ಬೆಂಗಳೂರು: ಹಾಸ್ಯ ಕಲಾವಿದ ವೀರ್ ದಾಸ್ ಅವರ ಕಾರ್ಯಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ (HJS) ಅಕ್ಷೇಪಣೆ ಎತ್ತಿ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಶೋ ರದ್ದುದೊಳಿಸಲಾಗಿದೆ.

- Advertisement -

ಬೆಂಗಳೂರಿನಲ್ಲಿ ನಡೆಯಲಿರುವ ಹಾಸ್ಯ ಕಲಾವಿದ ವೀರ್ ದಾಸ್ ಅವರ ಕಾರ್ಯಕ್ರಮದ ವಿರುದ್ಧ ಬಲಪಂಥೀಯ ಸಂಘಟನೆ ಹಿಂದೂ ಜನಜಾಗೃತಿ ಸಮಿತಿ ಪೊಲೀಸರಿಗೆ ದೂರು ನೀಡಿದ್ದು, ವೀರ್ ದಾಸ್ ಅವರು ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನವೆಂಬರ್ 11ರಂದು ಮಲ್ಲೇಶ್ವರಂನ ಚೌಡಯ್ಯ ಸ್ಮಾರಕದ ಸಭಾಂಗಣದಲ್ಲಿ ನಟ, ಹಾಸ್ಯ ಕಲಾವಿದ ವೀರ್ ದಾಸ್ ಅವರ ಕಾಮಿಡಿ ಶೋವನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ ವೀರ್ ದಾಸ್ ಪದೇ ಪದೇ ಪ್ರಧಾನಿ ಮೋದಿ ಮತ್ತು ಹಿಂದೂ ಮಹಿಳೆಯರ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಮೋಹನ್ ಗೌಡ ನೇತೃತ್ವದ ಹಿಂದೂ ಜನಜಾಗೃತಿ ಸಮಿತಿ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ.

- Advertisement -

ಈ ಕುರಿತು ಇನ್ಸ್ ಸ್ಟಾಗ್ರಾಂ ನಲ್ಲಿ ಪ್ರತಿಕ್ರಿಯಿಸಿದ ವೀರ್ ದಾಸ್, ಅನಿವಾರ್ಯ ಕಾರಣಗಳಿಂದ ಬೆಂಗಳೂರಿನ ಕಾರ್ಯಕ್ರಮವನ್ನು ಮುಂದೂಡುತ್ತಿದ್ದೇವೆ. ಕಾರ್ಯಕ್ರಮದ ಕುರಿತ ಹೊಸ ಮಾಹಿತಿ ಮತ್ತು ದಿನಾಂಕವನ್ನು ಶೀಘ್ರದಲ್ಲೇ ತಿಳಿಸುತ್ತೇವೆ. ಅನಾನುಕೂಲತೆಗಾಗಿ ಕ್ಷಮಿಸಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

Join Whatsapp