ಬಿಜೆಪಿ MLC ಆರ್.ಶಂಕರ್ ಮನೆ ಮೇಲೆ ದಾಳಿ ನಡೆಸಿದ ವಾಣಿಜ್ಯ ತೆರಿಗೆ ಇಲಾಖೆ

Prasthutha|

►ಸಾರ್ವಜನಿಕರಿಗೆ ಹಂಚಲು ತಂದ ಹಲವಾರು ವಸ್ತುಗಳನ್ನು ಪತ್ತೆ ಹಚ್ಚಿದ ಅಧಿಕಾರಿಗಳು

- Advertisement -

ಹಾವೇರಿ: ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಅವರ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ(Commercial Taxes Department) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್ ಮನೆ ಮೇಲೆ ನಿನ್ನೆ(ಮಾರ್ಚ್ 14) ತಡರಾತ್ರಿ ದಾಳಿಯಾಗಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆರ್.ಶಂಕರ್ ಗೃಹಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ. ಆರ್.ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟಾ ಹಾಗೂ ಎಲ್.ಕೆ.ಜಿ ಮಕ್ಕಳಿಗೆ ಹಂಚಲು ತಂದಿದ್ದ ಸ್ಕೂಲ್ ಬ್ಯಾಗ್ ಸಿಕ್ಕಿವೆ ಎಂದು ತಿಳಿದುಬಂದಿವೆ.

ಸುಮಾರು 8 ಕೊಟಿ ರೂಪಾಯಿ ವೆಚ್ಚದ ವಸ್ತುಗಳು ಪತ್ತೆಯಾಗಿವೆ ಎಂದು ಅಂದಾಜಿಸಲಾಗಿದ್ದು, ಈ ಎಲ್ಲ ವಸ್ತುಗಳ GST ಬಿಲ್ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್ ಶಂಕರ್, ಬಿಲ್ ಕೊಡಲು ಅವಕಾಶ ಕೇಳಿದ್ದಾರೆ. ಒಂದು ವೇಳೆ ಸರಿಯಾದ GST ಬಿಲ್ ಇಲ್ಲದಿದ್ರೆ ದಂಡ ವಿಧಿಸುವ ಸಾಧ್ಯತೆ ಇದೆ.

- Advertisement -

ಈ ಕುರಿತು ಮಾಹಿತಿ ನೀಡಿದ ಹಾವೇರಿ ಜಿಲ್ಲಾಧಿಕಾರಿ ರಘುನಂದನಮೂರ್ತಿ, ಎಲ್ಲ ದಾಖಲೆಗಳನ್ನು ಕೊರ್ಟ್ ಮುಂದೆ ಹಾಜರುಪಡಿಸಿ, ಎಫ್ಐಆರ್ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.



Join Whatsapp