ಬಾಲಕನ ನರಳಾಟ ನೋಡಿ ಬಿಕ್ಕಿ ಬಿಕ್ಕಿ ಅತ್ತ ಕಮಿಷನರ್

Prasthutha|

ಲಖಿಂಪುರ ಖೇರಿ: ಅಪಘಾತದಲ್ಲಿ ಗಾಯಗೊಂಡವರ ಸ್ಥಿತಿಗತಿ ತಿಳಿಯಲು ಲಖನೌ ಕಮಿಷನರ್ ರೋಷನ್ ಜೇಕಬ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದರು. ಅಲ್ಲಿ ಬಾಲಕನೊಬ್ಬ ನೋವಿನಿಂದ ನರಳುತ್ತಿರುವುದನ್ನು ಗಮನಿಸಿದ ಕಮಿಷನರ್ ಬಿಕ್ಕಿ ಬಿಕ್ಕಿ ಅತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

- Advertisement -


ಸೆಪ್ಟೆಂಬರ್ 26 ರಂದು ವಾಜಪೇಯಿ ಗ್ರಾಮದಲ್ಲಿ ಮಣ್ಣಿನ ಗೋಡೆ ಕುಸಿದು ಮೂವರು ಮಕ್ಕಳು ಸಾವನ್ನಪ್ಪಿದ್ದರು. ಈ ದುರಂತದಲ್ಲಿ ಬಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಬಾಲಕ ನೋವಿನಿಂದ ನರಳುತ್ತಿರುವುದನ್ನು ಗಮನಿಸಿದ ಕಮಿಷನರ್ ಕಣ್ಣೀರು ತಡೆಯಲಾಗದೇ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Join Whatsapp