Home ಟಾಪ್ ಸುದ್ದಿಗಳು ಬಾಲಕನ ನರಳಾಟ ನೋಡಿ ಬಿಕ್ಕಿ ಬಿಕ್ಕಿ ಅತ್ತ ಕಮಿಷನರ್

ಬಾಲಕನ ನರಳಾಟ ನೋಡಿ ಬಿಕ್ಕಿ ಬಿಕ್ಕಿ ಅತ್ತ ಕಮಿಷನರ್

ಲಖಿಂಪುರ ಖೇರಿ: ಅಪಘಾತದಲ್ಲಿ ಗಾಯಗೊಂಡವರ ಸ್ಥಿತಿಗತಿ ತಿಳಿಯಲು ಲಖನೌ ಕಮಿಷನರ್ ರೋಷನ್ ಜೇಕಬ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದರು. ಅಲ್ಲಿ ಬಾಲಕನೊಬ್ಬ ನೋವಿನಿಂದ ನರಳುತ್ತಿರುವುದನ್ನು ಗಮನಿಸಿದ ಕಮಿಷನರ್ ಬಿಕ್ಕಿ ಬಿಕ್ಕಿ ಅತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಸೆಪ್ಟೆಂಬರ್ 26 ರಂದು ವಾಜಪೇಯಿ ಗ್ರಾಮದಲ್ಲಿ ಮಣ್ಣಿನ ಗೋಡೆ ಕುಸಿದು ಮೂವರು ಮಕ್ಕಳು ಸಾವನ್ನಪ್ಪಿದ್ದರು. ಈ ದುರಂತದಲ್ಲಿ ಬಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಬಾಲಕ ನೋವಿನಿಂದ ನರಳುತ್ತಿರುವುದನ್ನು ಗಮನಿಸಿದ ಕಮಿಷನರ್ ಕಣ್ಣೀರು ತಡೆಯಲಾಗದೇ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Join Whatsapp
Exit mobile version