ಬಿಜೆಪಿಯಿಂದ ಸಂವಿಧಾನ ಬದಲಾವಣೆ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ದೂರು

Prasthutha|

ಮುಂಬೈ: ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡುತ್ತಿರುವ ಹೇಳಿಕೆ ವಿರುದ್ಧ ಕೇಂದ್ರದ ಸಾಮಾಜಿಕ ನ್ಯಾಯ ಖಾತೆಯ ರಾಜ್ಯ ಸಚಿವ ರಾಮದಾಸ್ ಅಠಾವಳೆ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದ್ದಾರೆ.

- Advertisement -


ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತದೆ ಎಂದು ರಾಹುಲ್ ಗಾಂಧಿ ಪದೇ ಪದೇ ಹೇಳುತ್ತಿದ್ದಾರೆ. ಈ ಆರೋಪಗಳನ್ನು ಪ್ರಧಾನಿ ನರೇಂದ್ರ ಮೋದಿ ಹಲವು ಬಾರಿ ಅಲ್ಲಗಳೆದಿದ್ದಾರೆ. ಹಾಗಾಗಿ, ಇಂತಹ ಹೇಳಿಕೆ ನೀಡದಂತೆ ಅವರ ಮೇಲೆ ನಿರ್ಬಂಧ ಹೇರುವಂತೆ ದೂರು ನೀಡಿದ್ದೇನೆಎಂದು ಅಠಾವಳೆ ಹೇಳಿದ್ದಾರೆ.

Join Whatsapp