Home ಟಾಪ್ ಸುದ್ದಿಗಳು ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ಆರೋಪ: ರಕ್ಷಿತ್ ಶಿವರಾಂ ವಿರುದ್ಧ ದೂರು ದಾಖಲು

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ಆರೋಪ: ರಕ್ಷಿತ್ ಶಿವರಾಂ ವಿರುದ್ಧ ದೂರು ದಾಖಲು

ಬೆಳ್ತಂಗಡಿ: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬಿಜೆಪಿ ಬೆಳ್ತಂಗಡಿ ಮಂಡಲ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದೆ.


ಆ.19ರಂದು ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ರಕ್ಷಿತ್ ಶಿವರಾಂ ಅವರು, ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ಹೇಳಿದ್ದರು.


ಇದೀಗ ರಕ್ಷಿತ್ ಶಿವರಾಂ ಅವರ ಹೇಳಿಕೆಯನ್ನು ವಿರೋಧಿಸಿ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ರಾಷ್ಟ್ರ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ ಎಂದು ದೂರು ನೀಡಲಾಗಿದೆ.

Join Whatsapp
Exit mobile version