ಅಕ್ರಮ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

Prasthutha|

ಬೆಂಗಳೂರು: ಕೆಐಎಡಿಬಿಯಿಂದ ಅಕ್ರಮವಾಗಿ ಭೂಮಿ ಪಡೆದ ಆರೋಪ ಸಂಬಂಧ ಬಿಜೆಪಿ ಎಂಎಲ್ ​ಸಿ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಸಲೀಂ ಅಹ್ಮದ್ ನೇತೃತ್ವದ ಕಾಂಗ್ರೆಸ್ ಸದಸ್ಯರ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ.

- Advertisement -

ಛಲವಾದಿ ನಾರಾಯಣಸ್ವಾಮಿ ಕೆಐಎಡಿಬಿಯಿಂದ ಬೇರೆಯವರ ಹೆಸರಲ್ಲಿ ಭೂಮಿ ಪಡೆದು ತಮ್ಮ ಹೆಸರಿಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಸದಸ್ಯರು ತನಿಖೆ ನಡೆಸಲು ಅನುಮತಿ ನೀಡುವಂತೆ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ನೇತೃತ್ವದ ನಿಯೋಗದಲ್ಲಿ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ವಸಂತ ಕುಮಾರ್, ಪುಟ್ಟಣ್ಣ, ರವಿ, ಉಮಾಶ್ರೀ ಹಾಗೂ ಸುಧಾಮ್ ದಾಸ್, ದಿನೇಶ್ ಗೂಳಿಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.



Join Whatsapp
Exit mobile version