Home ಕರಾವಳಿ ಗರ್ಭಿಣಿ ಮಹಿಳೆಯನ್ನು ಅಮಾನವೀಯವಾಗಿ ನಡೆಸಿಕೊಂಡ ಪ್ರಕರಣ; ತನಿಖೆಗೆ ಒತ್ತಾಯಿಸಿ ಡಿಸಿ, ಕಮಿಷನರ್ ಗೆ ದೂರು

ಗರ್ಭಿಣಿ ಮಹಿಳೆಯನ್ನು ಅಮಾನವೀಯವಾಗಿ ನಡೆಸಿಕೊಂಡ ಪ್ರಕರಣ; ತನಿಖೆಗೆ ಒತ್ತಾಯಿಸಿ ಡಿಸಿ, ಕಮಿಷನರ್ ಗೆ ದೂರು

ಗರ್ಭಿಣಿ ಮಹಿಳೆಯನ್ನು ಅಮಾನವೀಯವಾಗಿ ನಡೆಸಿಕೊಂಡ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಂತ್ರಸ್ತ ಕುಟುಂಬದ ಸದಸ್ಯರು ಶುಕ್ರವಾರ ಎಸ್ ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ನಿಯೋಗದೊಂದಿಗೆ ಜಿಲ್ಲಾಧಿಕಾರಿ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಖತೀಜಾ ಜಾಸ್ಮಿನ್ ಎಂಬ ಗರ್ಭಿಣಿ ಮಹಿಳೆಯನ್ನು ಡಾಕ್ಟರ್ ಪ್ರಿಯಾ ಬಳ್ಳಾಲ್, ಡಾ ಜಯಪ್ರಕಾಶ್, ಡಾಕ್ಟರ್ ಮುರಲೀಧರ್ ಹಾಗೂ ಇತರ ಕೆಲವು ವೈದ್ಯರು ಹಾಗೂ ಆಸ್ಪತ್ರೆಯವರು ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ರಾತ್ರಿ ಇಡೀ ಅಲೆದಾಡಿಸಿದ್ದಾರೆ. ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರವಿದೆ. ಈ ಬಗ್ಗೆ ಮೊಕದ್ದಮೆ ದಾಖಲಿಸಿ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Join Whatsapp
Exit mobile version