ವಿಧಾನಸಭಾ ಅಧಿವೇಶನ: ಕೂರತ್ ತಂಙಳ್, ನಿರೂಪಕಿ ಅಪರ್ಣಾ ಸೇರಿ ಅಗಲಿದ ಗಣ್ಯರಿಗೆ ಸಂತಾಪ

Prasthutha|

ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶ ಆರಂಭವಾಗಿದ್ದು, ಅಗಲಿದ ಗಣ್ಯರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

- Advertisement -


ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿದರು.


ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.



Join Whatsapp
Exit mobile version