ಕಾಂಗ್ರೆಸ್‌ ದೇಶಕ್ಕೆ ಹಿಡಿದ ಗ್ರಹಣ: ಸಾರಿಗೆ ಸಚಿವ ಬಿ.ಶ್ರೀರಾಮುಲು

Prasthutha|

ಚಿತ್ರದುರ್ಗ: ಸೂರ್ಯ, ಚಂದ್ರ ಗ್ರಹಣದಂತೆ ಕಾಂಗ್ರೆಸ್ ನಾಯಕರು ಆಗಾಗ ಕ್ಷೇತ್ರಕ್ಕೆ ಬಂದು ಹೋಗುತ್ತಾರೆ. ಕಾಂಗ್ರೆಸ್‌ ಪಕ್ಷವು ದೇಶಕ್ಕೆ ಹಿಡಿದ ಗ್ರಹಣ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

- Advertisement -

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್‌ ಗ್ರಹಗಳಂತೆ ಕಾಡುತ್ತಿದೆ. ಅಭಿವೃದ್ಧಿಗೆ ಕಾಂಗ್ರೆಸ್‌ ತಡೆಗೋಡೆಯಾಗಿದ್ದು, ಇಡೀ ದೇಶಕ್ಕೆ ಮಾರಕವಾಗಿದೆ’ ಎಂದು ಹೇಳಿದ್ದಾರೆ.

‘ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಸ್ತಿತ್ವ ಉಳಿಸಿಕೊಳ್ಳಲು ಹರಸಾಹಸಪಡುತ್ತಿದೆ. 25 ಕ್ಷೇತ್ರಗಳ ಪೈಕಿ ಬಿಜೆಪಿ 15 ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ನಿಶ್ಚಿತ’ ಎಂದು ಹೇಳಿದರು.

Join Whatsapp