ಕರ್ನಾಟಕ ಬಂದ್ ಯಶಸ್ವಿಗೆ ಸಹಕರಿಸಿದ ಸರ್ವರಿಗೂ ಅಭಿನಂದನೆ: ಅಬೂಬಕ್ಕರ್ ಕುಳಾಯಿ

Prasthutha|

ಮಂಗಳೂರು: ಕರ್ನಾಟಕ ಬಂದ್ ಗೆ ಬೆಂಬಲ  ನೀಡಿ ಬಂದ್ ಯಶಸ್ವಿಯಾಗಲು ಸಹಕರಿಸಿದ ಎಲ್ಲರಿಗೂ ಎಸ್ ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಅಭಿನಂದನೆ ಸಲ್ಲಿಸಿದೆ.

- Advertisement -

ಈ ಬಗ್ಗೆ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಹೇಳಿಕೆ ಬಿಡುಗಡೆ ಮಾಡಿದ್ದು, ಕರ್ನಾಟಕ ಹೈಕೋರ್ಟ್ ಹಿಜಾಬ್ ಕುರಿತಾದ ಅನ್ಯಾಯದ ಮತ್ತು ಅಸಾಂವಿಧಾನಿಕ ತೀರ್ಪಿನ ವಿರುದ್ಧವಾಗಿ ಕರ್ನಾಟಕ ರಾಜ್ಯ ಅಮೀರ್ ಎ ಶರೀಯತ್ ಮುಖ್ಯಸ್ಥರಾದ ಮೌಲಾನ ಸಗೀರ್ ಅಹಮ್ಮದ್  ಮತ್ತು ವಿವಿಧ ಮುಸ್ಲಿಂ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಸ್ವಯಂ ಪ್ರೇರಿತ ಕರ್ನಾಟಕ ಬಂದ್ ಅನ್ನು ಬೆಂಬಲಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಸ್ವಯಂ ಪ್ರೇರಿತ ವಾಗಿ ಸಹಕರಿಸಿ ಬಂದ್ ಯಶಸ್ವಿಗೊಳಿಸಿದ ಎಲ್ಲಾ ವರ್ತಕರಿಗೆ, ಅಟೋ ,ಟ್ಯಾಕ್ಸಿ ,ಬಸ್ ಚಾಲಕ ,ಮಾಲಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಸಹಕರಿಸಿದ ಸರ್ವರಿಗೂ ಎಸ್ ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಅಭಿನಂದನೆ ಸಲ್ಲಿಸುತ್ತಿದೆ.

ಇದೇ ರೀತಿಯಲ್ಲಿ ಸಂವಿಧಾನವನ್ನು ಉಳಿಸಲು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಮುಂದಿನ ದಿನಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಸಹಕರಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -


Join Whatsapp