ನಾಳೆ ಸಂಜೆ ಕಾಂಗ್ರೆಸ್’ನಿಂದ ಮಲ್ಲೂರಿನಲ್ಲಿ ವಿಜಯೋತ್ಸವ: ಇನಾಯತ್ ಅಲಿ ಭಾಗಿ

Prasthutha|

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ವಿಜಯ ಸಾಧಿಸಿದ್ದು, ಗೆಲುವನ್ನು ಸಂಭ್ರಮಿಸಲು ಮಲ್ಲೂರು ವಲಯ ಕಾಂಗ್ರೆಸ್, ಯುವ ಕಾಂಗ್ರೆಸ್ ಜಂಟಿಯಾಗಿ ನಾಳೆ ( ಮೇ 23) ಸಂಜೆ 7 ಗಂಟೆಗೆ ಬದ್ರಿಯಾ ನಗರದಿಂದ ಮಲ್ಲೂರು ವರೆಗೆ ಅದ್ದೂರಿ ವಿಜಯೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸುಧೀರ್ ರಾವ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಇನಾಯತ್ ಅಲಿ ಯವರಿಗೆ ಮಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭರ್ಜರಿ ಲೀಡ್ ಕೊಟ್ಟ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಈ ವಿಜಯೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಆದುದರಿಂದ ಎಲ್ಲಾ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಯುವ ಕಾಂಗ್ರೆಸ್ ಕಾರ್ಯಕರ್ತರು, ಹಿತೈಷಿಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸುಧೀರ್ ರಾವ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.



Join Whatsapp