ಬಿಜೆಪಿ ಪಕ್ಷ  ಎಸ್‌.ಎಂ.ಕೃಷ್ಣ ರನ್ನು ಬೀದಿಗೆ ತಂದು ಅವಮಾನಿಸಿದೆ: ಕಾಂಗ್ರೆಸ್‌ ಆರೋಪ

Prasthutha|

ಬೆಂಗಳೂರು: ಬಿಜೆಪಿ ಪಕ್ಷ  ಎಸ್‌.ಎಂ.ಕೃಷ್ಣ ಅವರನ್ನು ಬೀದಿಗೆ ತಂದು ಅವಮಾನಿಸಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್‌ನಲ್ಲಿ ಅಗ್ರಗಣ್ಯ ನಾಯಕರಾಗಿದ್ದ ಹಿರಿಯ ನಾಯಕ ಕೃಷ್ಣ ಅವರ ಬಳಿ ಆಡಳಿತಾತ್ಮಕ ಸಲಹೆ ಕೇಳುವ ಮನಸ್ಸು ಬಿಜೆಪಿಗರಿಗೆ ಇಲ್ಲ. ಅವರ ಸಲಹೆ ಬಿಜೆಪಿಗೆ ಬೇಕಾಗಿಯೂ ಇಲ್ಲ. ಬಿಜೆಪಿಯ ಸಿದ್ಧಾಂತಗಳು ಕೃಷ್ಣರಿಗೆ ಪಥ್ಯವಾದವೇ ಅಥವಾ ಕೃಷ್ಣರೇ ಬಿಜೆಪಿಗೆ ಅಪಥ್ಯವಾದರೇ? ಎಂದು ಕಾಂಗ್ರೆಸ್‌ ಮಾರ್ಮಿಕವಾಗಿ ಪರ್ಶ್ನಿಸಿದೆ.

- Advertisement -

ಹೊಸ ವರ್ಷದ ಸಂದೇಶ ನೀಡುವ ಸಂದರ್ಭದಲ್ಲಿ ರಾಜಕೀಯ ನಿವೃತ್ತಿಯ ವಿಷಯವನ್ನು ಪ್ರಸ್ತಾಪಿಸಿದ ಎಸ್‌.ಎಂ.ಕೃಷ್ಣ  ತಾನು ರಾಜಕೀಯದಿಂದ ನಿವೃತ್ತಯಾಗುತ್ತಿರುವುದಾಗಿ ಹೇಳಿದ್ದಾರೆ. ‘ನನಗೀಗ 90 ವರ್ಷ ವಯಸ್ಸು ಆಗಿದ್ದು, ಇದರ ಅರಿವು ನನಗಿದೆ. 90 ವರ್ಷದ ನಾನು 50 ವರ್ಷದವನಂತೆ ನಟಿಸಲು ಸಾಧ್ಯವಿಲ್ಲ. ಆದ್ದರಿಂದ ಕ್ರಮೇಣ ಸಾರ್ವಜನಿಕ ಜೀವನದಿಂದ ಹಿಂದಕ್ಕೆ ಸರಿಯುತ್ತಿದ್ದೇನೆ’ ಎಂದು ಅವರು ಹೇಳಿದ್ದರು.

Join Whatsapp