ಜೆಡಿಎಸ್ ಸೋಲಿಸಿ ಬಿಜೆಪಿಯನ್ನು ಗೆಲ್ಲಿಸುವುದೇ ಕಾಂಗ್ರೆಸ್ ಗುರಿ : ಸಿಎಂ ಇಬ್ರಾಹಿಂ ಕಿಡಿ

Prasthutha|

ಬೆಂಗಳೂರು: ರಾಜ್ಯಸಭೆಗೆ ಬಿಜೆಪಿಯ ಮೂರನೇ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಲೆಹರ್‌ಸಿಂಗ್‌ ಪಕ್ಷದ ಅಭ್ಯರ್ಥಿಯಲ್ಲ, ಬದಲಿಗೆ ಯಡಿಯೂರಪ್ಪ ಅಭ್ಯರ್ಥಿ. ಹೀಗಾಗಿ ಜೆಡಿಎಸ್‌ ಸೋಲಿಸಿ ಬಿಜೆಪಿಯನ್ನು ಗೆಲ್ಲಿಸಲು ಕಾಂಗ್ರೆಸ್‌ ಹೊರಟಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಕಿಡಿಕಾರಿದ್ದಾರೆ. 

- Advertisement -

ಕಾಂಗ್ರೆಸ್‌ನವರು ನಿರಂತರವಾಗಿ ಸುಳ್ಳು ಹೇಳುತ್ತಿದ್ದಾರೆ. ದಿನಗಳು ಕಳೆದಂತೆ ಚರಿತ್ರೆ ಹೊರ ಬರುತ್ತಿವೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಯಾವ ಆತ್ಮಸಾಕ್ಷಿ? ನನಗೆ ಬೆಂಬಲ ಕೊಡುತ್ತೇನೆ ಎಂದರಲ್ಲಾ, ಪರಿಷತ್‌ನಲ್ಲಿಯೇ ನನಗೆ ಬೆಂಬಲ ನೀಡಲಿಲ್ಲ. ಜೆಡಿಎಸ್‌ ಸೋಲಿಸಿ ಬಿಜೆಪಿ ಗೆಲ್ಲಿಸಲು ಎರಡನೇ ಅಭ್ಯರ್ಥಿ ಹಾಕಿದ್ದಾರೆ ಅಷ್ಟೇ ಎಂದು ವಾಗ್ದಾಳಿ ನಡೆಸಿದ್ದಾರೆ.

Join Whatsapp