ಬಿಜೆಪಿಯ ಸೋಲಿನ ಭಯದಿಂದ ಕಾಂಗ್ರೆಸ್ ಬ್ಯಾಂಕ್ ಖಾತೆ ಮುಟ್ಟುಗೋಲು: ಸಿದ್ದರಾಮಯ್ಯ

Prasthutha|

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭೀತಿ ಇದೆ. ಅದೇ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

- Advertisement -

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬ್ರಿಟೀಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ ಹುತಾತ್ಮರಾದ, ಜೈಲು ಸೇರಿದ ಚರಿತ್ರೆ ಇರುವ ಪಕ್ಷ ಕಾಂಗ್ರೆಸ್. ಬಿಜೆಪಿ ನಮಗೆ ಎಷ್ಟೇ ತೊಂದರೆ ಕೊಟ್ಟರೂ ಕಾಂಗ್ರೆಸ್ ಕಾರ್ಯಕರ್ತರು ಹೋರಾಟದ ಹಾದಿಯಲ್ಲೇ ಎಲ್ಲವನ್ನೂ ಎದುರಿಸಲಿದ್ದಾರೆ’ ಎಂದರು.


ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯ ಅಂತಿಮ. ಕಾಂಗ್ರೆಸ್ ಜನರಿಂದ ಹಣ ಸಂಗ್ರಹಿಸಿದೆ. ಜನರು ಸ್ವಯಂಪ್ರೇರಿತವಾಗಿ ಕೊಟ್ಟ ಹಣ ಕಾಂಗ್ರೆಸ್ ಖಾತೆಯಲ್ಲಿತ್ತು. ಸಣ್ಣ ತಾಂತ್ರಿಕ ಕಾರಣ ನೀಡಿ ಇಡೀ ಖಾತೆಯನ್ನು ಮುಟ್ಟುಗೋಲು ಹಾಕಿಕೊಂಡಿರುವುದು ಸರ್ವಾಧಿಕಾರಿ ಧೋರಣೆ ಎಂದು ಹೇಳಿದರು.

Join Whatsapp