Home ಟಾಪ್ ಸುದ್ದಿಗಳು ಸರಪಾಡಿ ಕುಡಿಯುವ ನೀರಿನ ಯೋಜನೆ ಉದ್ಘಾಟನೆ ವಿವಾದ | ಕಾಂಗ್ರೆಸ್-ಬಿಜೆಪಿ ಮುಖಂಡರ ನಡುವೆ ವಾಗ್ವಾದ, ತಳ್ಳಾಟ

ಸರಪಾಡಿ ಕುಡಿಯುವ ನೀರಿನ ಯೋಜನೆ ಉದ್ಘಾಟನೆ ವಿವಾದ | ಕಾಂಗ್ರೆಸ್-ಬಿಜೆಪಿ ಮುಖಂಡರ ನಡುವೆ ವಾಗ್ವಾದ, ತಳ್ಳಾಟ

ಬಂಟ್ವಾಳ : ಇಲ್ಲಿನ ಸರಪಾಡಿಯಲ್ಲಿ ಅನುಷ್ಠಾನಗೊಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ಯರ ನಡುವೆ ಪರಸ್ಪರ ವಾಗ್ವಾದ ನಡೆದಿದೆ. ಈ ವೇಳೆ ನೂಕಾಟ-ತಳ್ಳಾಟವೂ ನಡೆದಿದೆ ಎಂದು ವರದಿಯಾಗಿದೆ.

ಯೋಜನೆಯನ್ನು ಭಾನುವಾರ ಬೆಳಗ್ಗೆ ಸಚಿವ ಈಶ್ವರಪ್ಪ ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಸಿದ್ಧತೆ ನಡೆಸುತ್ತಿದ್ದರು. ಇನ್ನೊಂದೆಡೆ ಇಲ್ಲಿಗೆ ಈ ಯೋಜನೆಯನ್ನು ಮಾಜಿ ಸಚಿವ ಬಿ. ರಮಾನಾಥ ರೈ ಅನುಷ್ಠಾನಗೊಳಿಸಿದ್ದಾರೆ. ಇದಕ್ಕಾಗಿ ಬಂಟ್ವಾಳ ತಾ.ಪಂ. ಚಂದ್ರಹಾಸ ಕರ್ಕೇರ ನೇತೃತ್ವದಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳು ಶನಿವಾರ ಬೆಳಗ್ಗೆ ಇಲ್ಲಿಗೆ ಆಗಮಿಸಿದ್ದಾರೆ.

ಈ ವೇಳೆ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಯೋಜನೆ ಉದ್ಘಾಟನೆಗೆ ಆಗಮಿಸಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದರಿಂದಾಗಿ ಎರಡೂ ಪಕ್ಷದ ಕಾರ್ಯಕರ್ತರು ಜಮಾಯಿಸಿದರು. ತಕ್ಷಣವೇ ನಗರ ಠಾಣೆ ಪೊಲೀಸರು ಬಂದು ಯೋಜನಾ ಘಟಕದ ಗೇಟ್ ಹಾಕಿ ತಡೆದರು. ಇದೇ ವೇಳೆ ಎರಡೂ ಪಕ್ಷಗಳ ಪ್ರಮುಖರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ತಳ್ಳಾಟ ನಡೆದಿದೆ. ಈ ನಡುವೆ, ರಮಾನಾಥ ರೈ, ಪ್ರಮುಖರಾದ ಬೇಬಿ ಕುಂದರ್, ಚಂದ್ರಪ್ರಕಾಶ್ ಶೆಟ್ಟಿ, ಬಿ. ಪದ್ಮಶೇಖರ್ ಜೈನ್ ಸಹಿತ ಕಾರ್ಯಕರ್ತರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.

Join Whatsapp
Exit mobile version