Home ಟಾಪ್ ಸುದ್ದಿಗಳು ಮಂಡ್ಯದಲ್ಲಿ ಕಾಂಗ್ರೆಸ್– ಬಿಜೆಪಿ ಒಟ್ಟಾಗಿ ಸೋಲಿಸಿದ್ರು, ರಾಮನಗರದಲ್ಲೂ ಆ ಸಂಚು ನಡೀತಿದೆ: ನಿಖಿಲ್ ಕುಮಾರಸ್ವಾಮಿ

ಮಂಡ್ಯದಲ್ಲಿ ಕಾಂಗ್ರೆಸ್– ಬಿಜೆಪಿ ಒಟ್ಟಾಗಿ ಸೋಲಿಸಿದ್ರು, ರಾಮನಗರದಲ್ಲೂ ಆ ಸಂಚು ನಡೀತಿದೆ: ನಿಖಿಲ್ ಕುಮಾರಸ್ವಾಮಿ

ರಾಮನಗರ: ಮಂಡ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ರೈತ ಸಂಘದವರು ಸೇರಿ ಚಕ್ರವ್ಯೂಹ ರಚಿಸಿ ನನ್ನನ್ನು ಸೋಲಿಸಿದ್ದರು. ಈಗ ರಾಮನಗರದಲ್ಲೂ ಆ ಸಂಚು ನಡೆಯುತ್ತಿದೆ ಎಂದು ರಾಮನಗರ ಕ್ಷೇತ್ರದ ಚುನಾವಣಾ ಅಭ್ಯರ್ಥಿಯೂ ಆಗಿರುವ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಪ್ರತಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ.


ರಾಮನಗರ ಕ್ಷೇತ್ರದಿಂದ ಡಿ.ಕೆ. ಸುರೇಶ್ ಸ್ಪರ್ಧೆ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ವಿರುದ್ಧ ರಾಮನಗರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಟ್ಟಾಗಿ ರಾಜಕೀಯ ಲೆಕ್ಕಾಚಾರ ಮಾಡುತ್ತಿವೆ. ಅಂತಿಮವಾಗಿ ಮತದಾರರು ತೀರ್ಮಾನಿಸುತ್ತಾರೆ ಎಂದು ಹೇಳಿದರು.


ಮಂಡ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ರೈತ ಸಂಘದವರು ಸೇರಿ ಚಕ್ರವ್ಯೂಹ ರಚಿಸಿ ನನ್ನನ್ನು ಸೋಲಿಸಿದ್ದರು. ಆದರೆ 5 ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದಿದೆ. ಅಭ್ಯರ್ಥಿಗಳನ್ನು ಹಾಕುವುದು ಆಯಾ ಪಕ್ಷಕ್ಕೆ ಬಿಟ್ಟ ವಿಚಾರ. ಅದನ್ನು ಅವರ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು ಎಂದರು.

Join Whatsapp
Exit mobile version