ಕಾಂಗ್ರೆಸ್, ಬಿಜೆಪಿಗೆ ದಲಿತರು, ಮುಸ್ಲಿಮರ ಬಗ್ಗೆ ಕಾಳಜಿ ಇಲ್ಲ: ಪ್ರಕಾಶ್ ಅಂಬೇಡ್ಕರ್

Prasthutha|

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ‘ಆರಕ್ಷಣ ಬಚಾವೊ ಯಾತ್ರೆ’ ನಡೆಸುತ್ತಿರುವ ವಂಚಿತ್ ಬಹುಜನ ಅಘಾಡಿ ಸಂಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಅವರು ಬಿಜೆಪಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -


ಬಿಜೆಪಿ ಹಾಗೂ ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖ ಇದ್ದಂತೆ. ಆ ಎರಡು ಪಕ್ಷಗಳಿಗೂ ದಲಿತರು, ಆದಿವಾಸಿಗಳು, ಮುಸ್ಲಿಮರು ಮತ್ತು ಇತರ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇಲ್ಲ. ಆದರೆ, ಚುನಾವಣೆಗಳಲ್ಲಿ ಅವರ ಮತಗಳ ಪಡೆಯಲು ಬಯಸುತ್ತಾರೆ ಎಂದು ಪ್ರಕಾಶ್ ಟೀಕಿಸಿದ್ದಾರೆ.


ಬಿಜೆಪಿಯು ‘ಮಹಾಯುತಿ’ಯನ್ನು (ಎನ್ಡಿಎ) ಮುನ್ನಡೆಸಿದರೆ, ಕಾಂಗ್ರೆಸ್ ‘ಇಂಡಿಯಾ’ ಮೈತ್ರಿಕೂಟವನ್ನು (ಮಹಾ ವಿಕಾಸ್ ಅಘಾಡಿ) ಮುನ್ನಡೆಸುತ್ತಿದೆ. ಲೋಕಸಭೆ ಚುನಾವಣೆ ಸಂದರ್ಭ ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ಜತೆ ಮೈತ್ರಿ ಮಾಡಿಕೊಳ್ಳಲು ಮಹಾ ವಿಕಾಸ್ ಅಘಾಡಿ (ವಿಬಿಎ) ಪ್ರಯತ್ನಿಸಿತ್ತು. ಆದರೆ, ಇದು ಕಾರ್ಯರೂಪಕ್ಕೆ ಬರಲಿಲ್ಲ ಎಂದು ಪ್ರಕಾಶ್ ಅಂಬೇಡ್ಕರ್ ಆರೋಪಿಸಿದ್ದಾರೆ.



Join Whatsapp