Home ಟಾಪ್ ಸುದ್ದಿಗಳು ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಬಿರುಸಿನ ಪ್ರಚಾರ

ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಬಿರುಸಿನ ಪ್ರಚಾರ

ಕೊಣಾಜೆ: ಮಂಗಳೂರು ವಿದಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರವಿವಾರ ಬೆಳಿಗ್ಗೆಯಿಂದ ರಾತ್ರಿಯವರೆಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಬಿರುಸಿನ ಪ್ರಚಾರ ನಡೆಸಿದರು.

ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ತೊಕ್ಕೊಟ್ಟು, ಕುತ್ತಾರು ಭಾಗ ಸೇರಿದಂತೆ ಅಂಬ್ಲಮೊಗರು, ಅಸೈಗೋಳಿ, ಕೊಣಾಜೆ, ಗ್ರಾಮಚಾವಡಿ, ಮುಡಿಪು, ಹರೇಕಳ, ನರಿಂಗಾನ, ಚೇಳೂರು, ಕಂಬಳಪದವು, ಕುರ್ನಾಡು, ಬೋಳಿಯಾರ್, ಮಂಜನಾಡಿ ಮೊದಲಾದೆಡೆ ಪ್ರಚಾರ ಕಾರ್ಯ ನಡೆಸಿದರು.


ಸ್ಥಳೀಯ ಶಾಸಕ ಯು.ಟಿ ಖಾದರ್ ಅವರ ಸಹೋದರ ಡಾ.ಇಫ್ತಿಕಾರ್ ಆಲಿ ಅವರು ಪದ್ಮರಾಜ್ ಅವರಿಗೆ ಸಾಥ್ ನೀಡಿದರು.

Join Whatsapp
Exit mobile version