ಹರಿಯಾಣದಲ್ಲಿ ಕಾಂಗ್ರೆಸ್ ಸ್ವಂತ ಬಲದಿಂದ ಗೆಲ್ಲುವ ಸಾಮರ್ಥ್ಯ ಹೊಂದಿದೆ: ಭೂಪಿಂದರ್ ಸಿಂಗ್

Prasthutha|

ಯಾವುದೇ ಪಕ್ಷದೊಂದಿಗೆ ಮೈತ್ರಿ ಕುರಿತು ಮಾತುಕತೆ ನಡೆಸಿಲ್ಲ

- Advertisement -

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವಂತ ಬಲದಿಂದ ಗೆಲ್ಲುವ ಸಾಮರ್ಥ್ಯ ಹೊಂದಿದ್ದು, ಯಾವುದೇ ಪಕ್ಷದೊಂದಿಗೆ ಮೈತ್ರಿ ಕುರಿತು ಮಾತುಕತೆ ನಡೆಸಿಲ್ಲ ಎಂದು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಬುಧವಾರ ಹೇಳಿದ್ದಾರೆ.


ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಜೊತೆ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಹೂಡಾ, ಯಾವುದೇ ಪಕ್ಷದೊಂದಿಗೆ ಮೈತ್ರಿ ಕುರಿತು ಮಾತುಕತೆ ನಡೆಸಿಲ್ಲ ಎಂದರು.

- Advertisement -


“ನಾವು ರಾಷ್ಟ್ರ ಮಟ್ಟದಲ್ಲಿ ಎಎಪಿಯೊಂದಿಗೆ ಮೈತ್ರಿ ಹೊಂದಿದ್ದೇವೆ. ಆದರೆ ಇಲ್ಲಿಯವರೆಗೆ ರಾಜ್ಯ ಮಟ್ಟಕ್ಕೆ ಸಂಬಂಧಿಸಿದಂತೆ ಯಾವುದೇ ಪಕ್ಷದ ಜೊತೆ ಮಾತುಕತೆ ನಡೆಸಿಲ್ಲ. “ಕಾಂಗ್ರೆಸ್ ಸ್ವಂತ ಬಲದ ಮೇಲೆ ಗೆಲ್ಲಲು ಸಮರ್ಥವಾಗಿದೆ. ಯಾವುದೇ ಮಾತುಕತೆ ನಡೆದಿಲ್ಲ” ಎಂದರು.



Join Whatsapp