ರಾಹುಲ್ ಗಾಂಧಿ ಬಗ್ಗೆ ಎಚ್ಚರಿಕೆಯಿಂದಿರಿ, ಕಾಂಗ್ರೆಸ್ ಮೀಸಲಾತಿ ಅಂತ್ಯಗೊಳಿಸುವ ಷಡ್ಯಂತ್ರ ಮಾಡುತ್ತಿದೆ: ಮಾಯಾವತಿ

Prasthutha|

ನವದೆಹಲಿ: ರಾಹುಲ್ ಗಾಂಧಿ ಬಗ್ಗೆ ಎಚ್ಚರಿಕೆಯಿಂದಿರಿ, ಕಾಂಗ್ರೆಸ್ ಮೀಸಲಾತಿಯನ್ನು ಅಂತ್ಯಗೊಳಿಸುವ ಷಡ್ಯಂತ್ರ ಮಾಡುತ್ತಿದೆ ಎಂದು ಬಹುಜನ ಸಮಾಜವಾದಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

- Advertisement -


ಎಸ್ ಸಿ, ಎಸ್ ಟಿ, ಒಬಿಸಿ ಮೀಸಲಾತಿಯನ್ನು ಕೊನೆಗೊಳಿಸಲು ಹಲವು ವರ್ಷಗಳಿಂದ ಕಾಂಗ್ರೆಸ್ ಷಡ್ಯಂತ್ರ ನಡೆಸುತ್ತಿದೆ ಎಂದು ಮಾಯಾವತಿ ಆರೋಪಿಸಿದ್ದಾರೆ.


ಅಮೆರಿಕದ ಜಾರ್ಜ್ ಟೌನ್ ವಿಶ್ವವಿದ್ಯಾಲಯದಲ್ಲಿ ಮೀಸಲಾತಿ ಮುಂದುವರಿಸುವ ಕುರಿತು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಸರಿಯಾದ ಸಮಯ ಬಂದಾಗ ಮೀಸಲಾತಿಯನ್ನು ಕೊನೆಗೊಳಿಸುವ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಲಿದೆ ಎಂದು ಹೇಳಿದ್ದಾರೆ. ಇದು ಮೀಸಲಾತಿಯನ್ನು ಕೊನೆಗೊಳಿಸುವ ಸಮಯವಲ್ಲ ಎಂದು ಹೇಳಿದ್ದರು.

- Advertisement -


ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ದೀರ್ಘಕಾಲ ಅಧಿಕಾರದಲ್ಲಿದ್ದಾಗ ಒಬಿಸಿ ಮೀಸಲಾತಿಯನ್ನು ಜಾರಿಗೆ ತರಲಿಲ್ಲ, ಜಾತಿ ಗಣತಿ ನಡೆಯದಂತೆ ತಡೆಯುವ ಇವರ ನಾಟಕದ ಬಗ್ಗೆ ಎಚ್ಚರವಿರಲಿ. ಭಾರತ ಉತ್ತಮ ಪರಿಸ್ಥಿತಿಯಲ್ಲಿದ್ದಾಗ ನಾವು ಎಸ್ ಸಿ, ಎಸ್ ಟಿ, ಒಬಿಸಿ ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ ಎಂದು ವಿದೇಶದಲ್ಲಿ ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಈ ನಾಟಕದ ಬಗ್ಗೆ ಈಗ ಎಚ್ಚರದಿಂದಿರಿ ಎಂದು ಬಿಎಸ್ ಪಿ ಮುಖ್ಯಸ್ಥರು ಹೇಳಿದ್ದಾರೆ.



Join Whatsapp