ಬಿಹಾರ: ಮಹಾ ಮೈತ್ರಿಯಿಂದ ಹೊರಬಂದ ಕಾಂಗ್ರೆಸ್; ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧಾರ!

Prasthutha|

ಪಾಟ್ನಾ: ಬಿಹಾರದಲ್ಲಿ ಮಹಾಮೈತ್ರಿಕೂಟದಿಂದ ಕಾಂಗ್ರೆಸ್ ಹಿಂದೆ ಸರಿದಿದ್ದು, ಮಾಜಿ ಸಿಪಿಐ ಯುವ ನಾಯಕ ಕನ್ನಯ್ಯ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಪಕ್ಷಕ್ಕೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಹೇಳಲಾಗಿದೆ.

- Advertisement -

ಆರ್‌ಜೆಡಿ ಮತ್ತು ಎಡಪಕ್ಷಗಳಿರುವ ಮೈತ್ರಿಯಿಂದ ಹೊರಬರುವುದನ್ನು ಕಾಂಗ್ರೆಸ್ ಘೋಷಿಸಿದ್ದು, ಉಪಚುನಾವಣೆ ಮಾತ್ರವಲ್ಲದೆ 2024ರ ಲೋಕಸಭಾ ಚುನಾವಣೆಯ ಎಲ್ಲಾ 40 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿದೆ.

ಮುಂಬರುವ ವಿಧಾನಸಭಾ ಚುನಾವಣಾ ಪ್ರಚಾರದ ಭಾಗವಾಗಿ ಸ್ಟಾರ್ ಪ್ರಚಾರಕರಾಗಿ ಕನಯ್ಯ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಆಗಮನದೊಂದಿಗೆ ಬಿಹಾರ ಕಾಂಗ್ರೆಸ್ ರಾಜಕೀಯಕ್ಕೆ ಮಹತ್ವದ ತಿರುವು ಸಿಕ್ಕಿದೆ.

- Advertisement -

ಕನಯ್ಯ ಅವರನ್ನು ಕಾಂಗ್ರೆಸ್‌ ಗೆ ಕರೆತರುವ ನಿರ್ಧಾರಕ್ಕೆ ಮಿತ್ರಪಕ್ಷ ಆರ್‌ಜೆಡಿ ವಿರೋಧ ವ್ಯಕ್ತಪಡಿಸಿತ್ತು.

Join Whatsapp