ಸೂರತ್ ನಲ್ಲಿ ಬಿಜೆಪಿ ಅವಿರೋಧ ಆಯ್ಕೆ: ಅಭ್ಯರ್ಥಿಯನ್ನು ಉಚ್ಛಾಟಿಸಿದ ಕಾಂಗ್ರೆಸ್

Prasthutha|

ಗುಜರಾತ್ ನ ಸೂರತ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ನಾಮಪತ್ರ ತಿರಸ್ಕೃತಗೊಳ್ಳುತ್ತಿದ್ದಂತೆ ಪಕ್ಷವು ಅವರನ್ನು ಉಚ್ಛಾಟಿಸಿದೆ.

- Advertisement -


ನೀಲೇಶ್ ಅವರ ನಾಮಪತ್ರ ರದ್ದಾದ ನಂತರ ಇತರೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದ ಬಳಿಕ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರನ್ನು ಅವರೋಧವಾಗಿ ಆಯ್ಕೆ ಮಾಡಲಾಗಿತ್ತು. ಈ ಕ್ಷೇತ್ರದ ಚುನಾವಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗುವ ಕುರಿತು ಕಾಂಗ್ರೆಸ್ ಮಾತನಾಡಿತ್ತು. ನೀಲೇಶ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿದೆ.

ನೀಲೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಲು ಕಾಂಗ್ರೆಸ್ ಶಿಸ್ತು ಸಮಿತಿ ನಿರ್ಧರಿಸಿದೆ. ಸೂರತ್ ಕ್ಷೇತ್ರದಿಂದ ನಾಮಪತ್ರ ರದ್ದತಿಗೆ ನೀಲೇಶ್ ಕುಂಭಾಣಿ ಹೊಣೆಗಾರಿಕೆಯನ್ನು ಶಿಸ್ತು ಸಮಿತಿ ಹೊರಿಸಿದೆ.

Join Whatsapp