ಕೊನೆಗೂ ತೇಜಸ್ವಿ ಸೂರ್ಯ ಮನೆ ಬಾಗಿಲಿಗೆ ಮಸಾಲೆ ದೋಸೆ ಡೆಲಿವರಿ ಮಾಡಿದ ಕಾಂಗ್ರೆಸ್

Prasthutha|

- Advertisement -

ಬೆಂಗಳೂರು: ಬೆಂಗಳೂರು ನಗರ ಮಳೆನೀರಿನ ಪ್ರವಾಹದಲ್ಲಿ ನಲುಗುತ್ತಿದ್ದಾಗ ಸಂಸದ ತೇಜಸ್ವಿ ಸೂರ್ಯ ಮಸಾಲೆ ದೋಸೆ ಪ್ರಮೋಟ್ ಮಾಡುವ ವೀಡಿಯೋ ಸಾಮಾಜಿಕ ತಾಣಗಳಲ್ಲಿ ಹಾಕಿ ಜನರು ಹಿಗ್ಗಮುಗ್ಗ ತರಾಟೆಗೆ ತೆಗೆದುಕೊಂಡ ನಂತರ ಸಂಸದ ತೇಜಸ್ವಿ ಸೂರ್ಯ ಮನೆಗೆ ಕಾಂಗ್ರೆಸ್ ಕಾರ್ಯಕರ್ತರು ಮಸಾಲೆ ದೋಸೆಯನ್ನು ಪಾರ್ಸಲ್ ಕಳುಹಿಸಿ ಕೊಟ್ಟಿದ್ದು, ದೋಸೆ ಡೆಲಿವರಿ ಮಾಡಲು ಬಂದವರನ್ನು ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ತೇಜಸ್ವಿ ಸೂರ್ಯ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಎಲ್ಲಿದೆ ದೋಸೆ? 24 ಗಂಟೆಯಾದರೂ ನನ್ನ ಮನೆಗೆ ದೋಸೆ ಬಂದಿಲ್ಲ, ದೋಸೆ ವಿಚಾರದಲ್ಲೂ ಕಾಂಗ್ರೆಸ್ ಮೋಸ ಮಾಡುತ್ತಿದೆ. ಅವರಿಗೆ ಸರಿಯಾಗಿ ದೋಸೆ ಕೊಡಲು ಸಾಧ್ಯವಿಲ್ಲ. ಹೀಗಿದ್ದರೂ ಉತ್ತಮ ಆಡಳಿತ ನೀಡುವ ಕನಸು ಕಾಣುತ್ತಾರೆ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದರು.

- Advertisement -

ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದು ಹಲವು ಪ್ರದೇಶಗಳು ಜಲಾವೃತಗೊಂಡಿದ್ದ ವೇಳೆ ಸಂಸದ ತೇಜಸ್ವಿ ಸೂರ್ಯ ಪದ್ಮನಾಭನಗರದ ಹೋಟೆಲ್‌ನಲ್ಲಿ ಮಸಾಲೆ ಪ್ರಮೋಟ್ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಜನರು ಸಂಕಷ್ಟ ಎದುರಿಸುತ್ತಿರಬೇಕಾದರೆ, ಸಂಸದರು ಈ ರೀತಿ ಹೋಟೆಲ್ ನಲ್ಲಿ ದೋಸೆ ತಿನ್ನುತ್ತಿರುವ ವಿಡಿಯೋವನ್ನು ಖಂಡಿಸಿದ್ದ ಕಾಂಗ್ರೆಸ್ ಪಕ್ಷ, ಸಂಸದರ ಮನೆಗೆ ದೋಸೆ ಕಳಿಸುವ ಮೂಲಕ ಪ್ರತಿಭಟನೆ ನಡೆಸಿತ್ತು.

Join Whatsapp