ಕಂಗನಾ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ: ಅಭ್ಯರ್ಥಿಗಳ ಪಟ್ಟಿಯಿಂದ ಸುಪ್ರಿಯಾ ಹೆಸರು ಕೈಬಿಟ್ಟ ಕಾಂಗ್ರೆಸ್

Prasthutha|

ಹೊಸದಿಲ್ಲಿ: ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್ ವಿರುದ್ಧ ವಿವಾದಾತ್ಮಕ ಪೋಸ್ಟ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆ ಸುಪ್ರಿಯಾ ಶ್ರೀನಾಠೆಯವರ ಹೆಸರನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಟ್ಟಿದೆ.

- Advertisement -

ಸುಪ್ರಿಯಾ ಹೇಳಿಕೆ ವಿರುದ್ಧ ಎದುರಾದ ತೀವ್ರ ಆಕ್ರೋಶದ ಅಲೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇಂದು ಸುಪ್ರಿಯಾ ಶ್ರೀನಾಟೆ ಅವರ ಉಮೇದುವಾರಿಕೆಯನ್ನು ಉತ್ತರ ಪ್ರದೇಶದ ಮಹಾರಾಜ್ ಗಂಜ್ ಕ್ಷೇತ್ರದಿಂದ ವಾಪಸ್ ಪಡೆದಿದೆ. 2019 ರಲ್ಲಿ ಸುಪ್ರಿಯಾ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಪಂಕಜ್ ಚೌಧರಿ ವಿರುದ್ಧ ಸೋತಿದ್ದರು ಎಂಬುದು ಗಮನಾರ್ಹ. ಕಂಗನಾ ರಣಾವತ್ ಮೇಲಿನ ಪೋಸ್ಟ್ ನಲ್ಲಿ ಭಾರೀ ರಾಜಕೀಯ ಸುಳಿಯಲ್ಲಿ ಸಿಲುಕಿದ ಸುಪ್ರಿಯಾ ಬದಲಿಗೆ ವೀರೇಂದ್ರ ಚೌಧರಿ ಅವರನ್ನು ಕಾಂಗ್ರೆಸ್ ಕಣಕ್ಕೆ ಇಳಿಸಿದೆ.

Join Whatsapp