ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ: ಬೊಮ್ಮಾಯಿ

Prasthutha|

ಹುಬ್ಬಳ್ಳಿ: ರಾಜ್ಯದಲ್ಲಿ ಅಪರಾಧಿಗಳಿಗೆ, ಅತ್ಯಾಚಾರಿಗಳಿಗೆ ರಾಜ್ಯ ಸರ್ಕಾರದ ರಕ್ಷಣೆ ಇದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು.

- Advertisement -


ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ ಎಂದು ಆರೋಪ ಮಾಡಿದ್ದಾರೆ. ಹಾನಗಲ್ನಲ್ಲಿ ಗ್ಯಾಂಗ್ ರೇಪ್ ಆಗಿದೆ, ನೈತಿಕ ಪೊಲೀಸ್ ಗಿರಿಯಂತಹ ಪ್ರಕರಣ ಹೊರಗೆ ಬರ್ತಿವೆ. ಇಂತಹ ಗ್ಯಾಂಗ್ ನಿರಂತರವಾಗಿ ಆ್ಯಕ್ಟೀವ್ ಆಗಿದೆ. ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಆಡಳಿತ ವ್ಯವಸ್ಥೆ, ಸರ್ಕಾರ ರೇಪಿಸ್ಟ್ ಗಳ ಜೊತೆ ನಿಂತಿದೆ. SITಗೆ ಕೊಡಿ ಅಂದ್ರೂ ಸರ್ಕಾರ ಕೊಡ್ತಿಲ್ಲ. ಪೋಸ್ಕೋ ಕೇಸ್ನಲ್ಲಿ ಕೇಸ್ ದಾಖಲು ಮಾಡಿಲ್ಲ. ಸುಳ್ಳು ಮೆಡಿಕಲ್ ಎಕ್ಸಾಮಿನ್ ಆಗಿವೆ. ಇದು ಮೆಡಿಕೋ ಲೀಗಲ್ ಕೇಸ್, ಸರ್ಕಾರ ಸಂತ್ರಸ್ತೆ ಬಗ್ಗೆ ಜವಾಬ್ದಾರಿ ತಗೊಬೇಕು. ಸಿಎಂ ಶಾಸಕರಿಗೆ ಹೇಳಿದ್ದೀನಿ ಅಂತಾರೆ. ಅಂದ್ರೆ ಸರ್ಕಾರ ಸತ್ತಿದೆಯಾ? ಆರೋಗ್ಯ ಇಲಾಖೆ ಸತ್ತಿದೆಯಾ ಎಂದ ಬಸವರಾಜ್ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ.


ಸಿದ್ದರಾಮಯ್ಯನವರ ಸರ್ಕಾರದಲ್ಲಿ ಕ್ರಿಮಿನಲ್ ಗಳಿಗೆ ಕುಮಕ್ಕು ಸಿಗುತ್ತಿದೆ. ಅಪರಾಧ ಕೃತ್ಯ ಎಸಗಿದವರಲ್ಲಿ ವೋಟ್ ಬ್ಯಾಂಕ್ ಇದೆ. ಹೀಗಾಗಿ ಅವರ ರಕ್ಷಣೆ ಮಾಡುವ ಕೆಲಸವನ್ನ ಸರ್ಕಾರ ಮಾಡುತ್ತಿದೆ. ಹಾನಗಲ್ನಲ್ಲಿ ಗ್ಯಾಂಗ್ ರೇಪ್ ಪ್ರಕರಣವನ್ನ ಖಂಡಿಸಿ ನಾವು ಇವತ್ತು ಪ್ರತಿಭಟನೆ ಮಾಡುತ್ತಿದ್ದೇವೆ. ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ಆದ್ರೂ ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಗ್ಯಾಂಗ್ ರೇಪ್ ಪ್ರಕರಣದಲ್ಲಿ ಸರಿಯಾದ ರೀತಿಯಲ್ಲಿ ತನಿಖೆ ನಡೆಯುತ್ತಿದೆ ಅಂತಾರೆ. ಹಾಗಾದ್ರೆ ಇಬ್ಬರೂ ಪೊಲೀಸರನ್ನ ಅಮಾನತು ಮಾಡಿದ್ದು ಏಕೆ? ಆ ಹೆಣ್ಣು ಮಗಳಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಕೊಡಿಸಲು ಇವರಿಂದ ಆಗಿಲ್ಲ. ಇಂತಹ ಘಟನೆಯಾದಾಗ ಸರ್ಕಾರವೇ ಸಂತ್ರಸ್ತರಿಗೆ ಚಿಕಿತ್ಸೆ ಕೊಡಿಸುವ ಕೆಲಸ ಮಾಡಬೇಕು ಎಂದರು.

Join Whatsapp