Home ಟಾಪ್ ಸುದ್ದಿಗಳು ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಯನ್ನು ಪಡೆಯಬೇಕು: ಯಡಿಯೂರಪ್ಪ

ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಯನ್ನು ಪಡೆಯಬೇಕು: ಯಡಿಯೂರಪ್ಪ

ಬೆಂಗಳೂರು: ಕೇಂದ್ರದ ಕಾಂಗ್ರೆಸ್ ನಾಯಕತ್ವಕ್ಕೆ ಜವಾಬ್ದಾರಿ ಇದ್ದರೆ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲಿ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಆಗ್ರಹಿಸಿದರು.

ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಪಾದಯಾತ್ರೆ ಕಾರ್ಯಕ್ರಮಲ್ಲಿ ಅವರು ಮಾತನಾಡಿದರು.


ರಾಜ್ಯದಲ್ಲಿ ಉಸಿರು ಕಟ್ಟುವ ವಾತಾವರಣ ಇದೆ. ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ಕೊಡಬೇಕು. ಪಾದಯಾತ್ರೆ ಮೈಸೂರಿಗೆ ತಲುಪುವ ಒಳಗಾಗಿ ರಾಜೀನಾಮೆ ಕೊಡಬೇಕು ಎಂದರು. ಹಣ ಹೆಂಡ ತೋಬ್ಬಲದಿಂದ ಸಿಎಂ ಅಧಿಕಾರದಲ್ಲಿದ್ದಾರೆ. ಕೇಂದ್ರದ ನಾಯಕತ್ವ ಕೂಡಲೇ ರಾಜೀನಾಮೆ ಪಡೆಯಬೇಕು. ಭ್ರಷ್ಟಾಚಾರ ರಾಜ್ಯದಲ್ಲಿ ಮುಗಿಲು ಮುಟ್ಟಿದೆ. ಕಾಂಗ್ರೆಸ್ ಸರ್ಕಾರ ದರೋಡೆಯಲ್ಲಿ ನಿರತವಾಗಿದೆ. ಕೇಂದ್ರದ ನಾಯಕತ್ವಕ್ಕೆ ಜವಾಬ್ದಾರಿ ಇದ್ದರೆ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

Join Whatsapp
Exit mobile version