Home ಟಾಪ್ ಸುದ್ದಿಗಳು ಬೆಲೆ ಏರಿಕೆ ಪ್ರತಿಭಟನೆಯನ್ನು ಧರ್ಮನಿಂದನೆಯಾಗಿ ತಿರುಚಿದ ಶಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಬೆಲೆ ಏರಿಕೆ ಪ್ರತಿಭಟನೆಯನ್ನು ಧರ್ಮನಿಂದನೆಯಾಗಿ ತಿರುಚಿದ ಶಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ನವದೆಹಲಿ: ಬೆಲೆ ಏರಿಕೆ ಪ್ರತಿಭಟನೆಯನ್ನು ಧರ್ಮನಿಂದನೆಯಾಗಿ ತಿರುಚಿದ ಕೇಂದ್ರ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ತಿರುಗೇಟು ನೀಡಿದ್ದು, ‘ಇದು ರೋಗಗ್ರಸ್ಥ ಮನಸ್ಥಿತಿ’ ಎಂದು ಅವರು ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ನ ಪ್ರತಿಭಟನೆಯನ್ನು ಖಂಡಿಸಿದ್ದ ಗೃಹ ಸಚಿವ ಅಮಿತ್ ಶಾ, ‘ಪ್ರಧಾನಿ ನರೇಂದ್ರ ಮೋದಿ ಅವರು ಇದೇ ದಿನ ರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಅದೇ ದಿನವನ್ನು ಆಯ್ಕೆ ಮಾಡಿಕೊಂಡಿದೆ. ಆ ಮೂಲಕ ಒಂದು ಧರ್ಮದವರನ್ನು ಓಲೈಸುತ್ತಿದೆ. ಇದರಿಂದ ಶ್ರೀ ರಾಮನಿಗೆ ಅವಮಾನವಾಗಿದೆ’ ಎಂದು ಆರೋಪಿಸಿದ್ದರು.


ಅಮಿತ್ ಶಾ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟೀಕಿಸಿದ್ದು, ಬೆಲೆ ಏರಿಕೆ, ನಿರುದ್ಯೋಗ ಮತ್ತು ಜಿಎಸ್ ಟಿ ವಿರುದ್ಧ ಕಾಂಗ್ರೆಸ್ ನ ಇಂದಿನ ಪ್ರಜಾಸತ್ತಾತ್ಮಕ ಪ್ರತಿಭಟನೆಗಳನ್ನು ತಿರುಚಿ, ಧ್ರುವೀಕರಿಸುವ ಮತ್ತು ದುರುದ್ದೇಶಪೂರಿತ ಆಯಾಮ ನೀಡುವ ಹತಾಶ ಪ್ರಯತ್ನವನ್ನು ಗೃಹ ಸಚಿವರು ಮಾಡಿದ್ದಾರೆ. ಇದು ರೋಗಗ್ರಸ್ಥ ಮನಸ್ಥಿತಿ. ನಮ್ಮ ಹೋರಾಟವು ಅಮಿತ್ ಶಾ ಅವರಿಗೆ ನಿಜಯವಾಗಿಯೂ ತಟ್ಟಿದೆ’ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

Join Whatsapp
Exit mobile version