ತಿರುಕನ ಕನಸಿನಂತೆ ಗಿರಕಿ ಹೊಡೆಯುತ್ತಿರುವ ಕಾಂಗ್ರೆಸ್ : ಸಿ.ಟಿ.ರವಿ

Prasthutha|

ಕೋಲಾರ : ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ನಡೆಯಲಿದ್ದು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಕಾಣುತ್ತಿರುವ ತಿರುಕನ ಕನಸು ನನಸಾಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ  ವ್ಯಂಗ್ಯವಾಡಿದ್ದಾರೆ.

- Advertisement -

ಕಾರ್ಯಕ್ರಮವೊಂದರಲ್ಲಿ ಮಾತನಾಡಿ‌ದ ಅವರು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಗೂಟ ಇಟ್ಟುಕೊಂಡು ಬಡಿದಾಡಬೇಕು ಅಷ್ಟೆ. ಕಾಂಗ್ರೆಸ್ ನ  ಶಾಸಕರು ಟೆಂಟ್‌ ಸಮೇತ ಗಂಟು‌ಮೂಟೆ ಕಟ್ಟಿಕೊಂಡು ಹೊರಬರಲು ತಯಾರಾಗಿದ್ದಾರೆ ಎಂದು ಹೇಳಿದರು.

ಈಗಾಗಲೇ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವೆ ಸಿ.ಎಂ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದ್ದು, ಹಲವು ಶಾಸಕರು ಪಕ್ಷಾಂತರಕ್ಕೆ ತಯಾರಾಗಿದ್ದಾರೆ  ಎಂದರು.

- Advertisement -

‘ಬಿಜೆಪಿ ಕಾರ್ಯಕರ್ತರು ಮುಂದಿನ ಚುನಾವಣೆ ವರೆಗೆ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.

Join Whatsapp