ಕಾಂಗ್ರೆಸ್ ಯಾವುದೇ ಒಂದು ಕೋಮಿನ ಜನರ ಪರವಾಗಿಲ್ಲ: ಸಚಿವ ಚಲುವರಾಯಸ್ವಾಮಿ

Prasthutha|

ನಾಗಮಂಗಲ: ಕಾಂಗ್ರೆಸ್ ಯಾವುದೇ ಒಂದು ಕೋಮಿನ ಜನರ ಪರವಾಗಿಲ್ಲ. ಈ ನಾಡಿನ, ದೇಶದ ಎಲ್ಲ ಜನರ ಪರವಾಗಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.

- Advertisement -

ನಾವು ಒಂದು ಸಮುದಾಯದವರನ್ನು ಓಲೈಸಿಕೊಳ್ಳುತ್ತಲೂ ಇಲ್ಲ, ತುಷ್ಣೀಕರಣ ಮಾಡುತ್ತಲೂ ಇಲ್ಲ. ಅದರ ಅಗತ್ಯವೂ ಇಲ್ಲ. ನಮಗೆ ಹಿಂದೂ-ಮುಸ್ಲಿಮರೆಲ್ಲರೂ ಸಮಾನರು. ಕೆಲವರು ಈ ಘಟನೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ನಾನು ಯಾವ ಕಾರಣಕ್ಕೂ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ತಿಳಿಸಿದರು.

ನಾಗಮಂಗಲದಲ್ಲಿ ಈ ರೀತಿಯ ಘಟನೆ ನಡೆಯಬಾರದಿತ್ತು. ದುರದೃಷ್ಟವಶಾತ್ ನಡೆದುಹೋಗಿದೆ. ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಎಲ್ಲಾ ರೀತಿಯ ಕ್ರಮಗಳನ್ನು ಜಿಲ್ಲಾಡಳಿತದಿಂದ ಕೈಗೊಳ್ಳಲಾಗುವುದು. ನಾಗಮಂಗಲದಲ್ಲಿ ಈಗ ಪರಿಸ್ಥಿತಿ ಶಾಂತಿಯುತವಾಗಿದೆ. ಸಹಜಸ್ಥಿತಿಯತ್ತ ಮರಳುತ್ತಿದೆ. ಜನರು ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ. ಸಹಜವಾಗಿ ಓಡಾಡಬಹುದು ಎಂದರು.



Join Whatsapp