ಗುಜರಾತ್ ನಲ್ಲಿ ಕಾಂಗ್ರೆಸ್ ಮುಗಿದು ಹೋಗಿದೆ, ಅದರ ಬಗ್ಗೆ ಪ್ರಶ್ನೆ ಕೇಳಬೇಡಿ: ಅರವಿಂದ್ ಕೇಜ್ರಿವಾಲ್

Prasthutha|

ಅಹ್ಮದಾಬಾದ್:  ಕಾಂಗ್ರೆಸ್ ನಾಯಕರೊಬ್ಬರು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವರದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಆ ಪಕ್ಷ ಮುಗಿದು ಹೋಗಿದೆ ಎಂದಿದ್ದಾರೆ.

- Advertisement -

ಎಎಪಿ ರಾಷ್ಟ್ರೀಯ ಸಂಚಾಲಕರು ನೈರ್ಮಲ್ಯ ಕಾರ್ಮಿಕರೊಂದಿಗೆ ಟೌನ್ ಹಾಲ್ ಉದ್ದೇಶಿಸಿ ಕೇಜ್ರಿವಾಲ್ ಮಾತನಾಡವಾಗ  ವರದಿಗಾರರೊಬ್ಬರು,  ಪಂಜಾಬ್ ನ ಎಎಪಿ ಸರ್ಕಾರವು ದಿವಾಳಿಯ ಅಂಚಿನಲ್ಲಿದೆ ಮತ್ತು ಸಂಬಳಕ್ಕೂ ಸಹ ಹಣವಿಲ್ಲ, ಆದರೆ ಗುಜರಾತ್ ನಲ್ಲಿ ಜಾಹೀರಾತುಗಳಿಗಾಗಿ ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಗಳಿಗೆ ಪ್ರತಿಕ್ರಿಯಿಸುವಂತೆ ಕೇಳಿದರು.

ಪ್ರತಿಕ್ರಿಯಿಸಿದ ಕೇಜ್ರಿವಾಲ್, ಕಾಂಗ್ರೆಸ್ ಮುಗಿದಿದೆ. ನೀವು ಅವರ ಪ್ರಶ್ನೆಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕು. ಜನರು ಇನ್ನು ಮುಂದೆ ತಮ್ಮ ಪ್ರಶ್ನೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.



Join Whatsapp