Home ಟಾಪ್ ಸುದ್ದಿಗಳು ಕಾಂಗ್ರೆಸ್ ಹಿಂದೂಗಳ ನಡುವೆ ಒಡಕು ಮೂಡಿಸಲು ಪ್ರಯತ್ನಿಸುತ್ತಿದೆ: ಪ್ರಧಾನಿ ಮೋದಿ

ಕಾಂಗ್ರೆಸ್ ಹಿಂದೂಗಳ ನಡುವೆ ಒಡಕು ಮೂಡಿಸಲು ಪ್ರಯತ್ನಿಸುತ್ತಿದೆ: ಪ್ರಧಾನಿ ಮೋದಿ

ಗುಜರಾತ್: ವಿರೋಧ ಪಕ್ಷವು ತನ್ನ ಓಲೈಕೆ ರಾಜಕಾರಣದಿಂದ ಹಿಂದೂಗಳ ನಡುವೆ ಒಡಕು ಮೂಡಿಸಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಈಗ ಹಿಂದೂಗಳ ನಡುವೆ ಒಡಕು ಮೂಡಿಸಲು ಯತ್ನಿಸುತ್ತಿದೆ. ಖರ್ಗೆ ಅವರು ಶ್ರೀರಾಮ ಮತ್ತು ಶಿವನ ಬಗ್ಗೆ ದುರುದ್ದೇಶದಿಂದ ಅತ್ಯಂತ ಅಪಾಯಕಾರಿ ಹೇಳಿಕೆ ನೀಡಿದ್ದಾರೆ. ಅವರು ರಾಮ ಮತ್ತು ಶಿವನ ಭಕ್ತರ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸಿ ಪರಸ್ಪರ ಹೊಡೆದಾಡಿಕೊಳ್ಳುವಂತೆ ಮಾಡುತ್ತಿದ್ದಾರೆ. ನಮ್ಮ ಸಾವಿರಾರು ವರ್ಷಗಳ ಸಂಪ್ರದಾಯಗಳನ್ನು ಮುರಿಯಲು ಮೊಘಲರಿಗೂ ಸಾಧ್ಯವಾಗಿರಲಿಲ್ಲ ಎಂದ ಪ್ರಧಾನಿ, ಈಗ ಕಾಂಗ್ರೆಸ್ ಅದನ್ನು ಮುರಿಯಲು ಬಯಸುತ್ತಿದೆಯೇ? ತುಷ್ಟೀಕರಣಕ್ಕಾಗಿ ಕಾಂಗ್ರೆಸ್‌ ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿದೆಯೇ ಎಂದು ಕೇಳಿದ್ದಾರೆ.

Join Whatsapp
Exit mobile version