ನೀವು ಮಮತಾ ಬ್ಯಾನರ್ಜಿಯ ದಲ್ಲಾಳಿ | ಕೋರ್ಟ್ ಆವರಣದಲ್ಲಿಯೇ ಚಿದಂಬರಂ ವಿರುದ್ಧ ಸ್ವಪಕ್ಷದ ವಕೀಲರ ಆಕ್ರೋಶ

Prasthutha|

ಕೋಲ್ಕತ್ತಾ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಕೀಲರಾಗಿ ಕಲ್ಕತ್ತಾ ಹೈಕೋರ್ಟ್ ಗೆ ಅಗಮಿಸಿದ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ವಿರುದ್ಧ ಸ್ವಪಕ್ಷದ ವಕೀಲರೇ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ನೀವು ಮಮತಾ ಬ್ಯಾನರ್ಜಿಯ ದಲ್ಲಾಳಿ, ನಿಮ್ಮಂತಹ ನಾಯಕರಿಂದಾಗಿ ಕಾಂಗ್ರೆಸ್ ಗೆ ಈ ದುಸ್ಥಿತಿ ಬಂದಿದೆ ಎಂದು ಅಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಿದ ಪ್ರತಿಭಟನಾಕಾರರು, ಚಿದಂಬರಂ ವಿರುದ್ಧ ಕಪ್ಪು ಭಾವುಟ ಪ್ರದರ್ಶಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಪ್ರತಿಭಟನಾಕಾರರಲ್ಲಿ ಒಬ್ಬರಾದ ವಕೀಲ ಕೌಸ್ತವ್ ಬಾಗ್ಚಿ, ‘ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ಚೌಧರಿ ಅವರು ಯಾವ ಶೇರುಗಳ ಖರೀದಿಯನ್ನು ಆಕ್ಷೇಪಿಸುತ್ತಿದ್ದಾರೋ ಅದರ ವಿರುದ್ಧ ಚಿದಂಬರಂ ಹಾಜರಾಗಿದ್ದಾರೆ” ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತನಾಗಿ ಹಿರಿಯ ಕಾಂಗ್ರೆಸ್ ಮುಖಂಡ ಚಿದಂಬರಂ ವಿರುದ್ಧ ಪ್ರತಿಭಟಿಸುವುದಾಗಿ ಅವರು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಪಕ್ಷದ ಹಿತಾಸಕ್ತಿಯ ವಿರುದ್ಧ ನಡೆಯುವ ಯಾವುದೇ ನಾಯಕನ ವಿರುದ್ಧ ಪಕ್ಷದ ಕಾರ್ಯಕರ್ತರು ಇದೇ ರೀತಿ ಪ್ರತಿಭಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Join Whatsapp