ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಹಾಕಿದ್ದ ಬಿಜೆಪಿ ಮುಖಂಡನ ಬಂಧನ

Prasthutha|

ಕಲಬುರಗಿ: ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಹಾಕಿದ್ದ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

- Advertisement -

‘ನೀವು ನಮಗೆ ಶೂಟ್ ಮಾಡಿ ನಾವು ಸಾಯಲು ಸಿದ್ಧ. ತಮಗೂ ನಾವು ಶೂಟ್ ಮಾಡಲು ಸಿದ್ಧ’ ಎಂದು ಮಣಿಕಂಠ ರಾಠೋಡ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ತಿಪ್ಪಣಪ್ಪ ಕಮಕನೂರ ಅವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು ಬ್ರಹ್ಮಪುರ ಪೊಲೀಸ್ ಠಾಣೆಯ ಪೊಲೀಸರು ಹೈದರಾಬಾದ್‌‌ನಲ್ಲಿ ಬಂಧಿಸಿದ್ದಾರೆ.

ತಿಪ್ಪಣಪ್ಪ ಕಮಕನೂರು ಅವರು ನೀಡಿದ್ದ ದೂರಿನ ಆಧಾರ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಸನ್ 506 ಅಡಿ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ.

Join Whatsapp