ಕಾಂಗ್ರೆಸ್ ನಾಯಕರು ಗಿಫ್ಟ್ ಕಾರ್ಡ್ ಗಳನ್ನು ವಿತರಿಸುತ್ತಿದ್ದಾರೆ: ಕುಮಾರಸ್ವಾಮಿ

Prasthutha|

ರಾಮನಗರ: ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ನಾಯಕರು ಗಿಫ್ಟ್ ಕಾರ್ಡ್ ಗಳನ್ನು ವಿತರಿಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

ತಮ್ಮ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಮತದಾರರಿಗೆ ಅಮಿಶವೊಡ್ಡುವ ಕೆಲಸ ಕಾಂಗ್ರೆಸ್ ಮುಖಂಡರಿಂದ ಅವ್ಯಾಹತವಾಗಿ ಜಾರಿಯಲ್ಲಿದೆ ಎಂದು ಹೇಳಿದರು.
ಚುನಾವಣಾ ಆಯೋಗ ಚುನಾವಣೆಗಳನ್ನು ಹೀಗೆ ನಡೆಸುವ ಬದಲು ಮತದಾರರಿಗೆ ಹಣ ನೀಡಿ ವೋಟು ಹಾಕಿಸುವ ಪದ್ಧತಿಯನ್ನು ಜಾರಿಗೆ ತರಬೇಕು ಅಂತ ಕುಹುಕವಾಡಿದರು. ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರು ತಮ್ಮ ಹಳೆಯ ಚಾಳಿಯನ್ನು ಮುಂದುವರಿಸಿದ್ದಾರೆ, ಜನರಲ್ಲಿ ಭಯದ ವಾತಾವರಣ ಸೃಷ್ಟಿಸಲಾಗಿದೆ, ಮತದಾರರಿಗೆ ಕುಕ್ಕರ್ ಹಂಚಿದ ಸಂಗತಿಯನ್ನು ಈಗಾಗಲೇ ಮಾಧ್ಯಮ ಮತ್ತು ಚುನಾವಣಾ ಆಯೋಗದ ಗಮನಕ್ಕೆ ತರಲಾಗಿದೆ, ಅದರೆ ಆಯೋಗ ಯಾವುದೇ ಕ್ರಮ ಜರುಗಿಸದ ಕಾರಣ, ಕಾಂಗ್ರೆಸ್ ನಾಯಕರು ತಮ್ಮ ಹಳೆಯ ಚಾಳಿಯನ್ನು ಮುಂದುವರಿಸಿದ್ದಾರೆ ಎಂದರು.

Join Whatsapp