ಡಿ.ಕೆ.ಶಿವಕುಮಾರ್ ವಿರುದ್ಧ ಕಾಂಗ್ರೆಸ್ ನಾಯಕರ ಪಿಸುಮಾತು: ವಿ.ಎಸ್. ಉಗ್ರಪ್ಪಗೆ ನೋಟಿಸ್ ಜಾರಿ!

Prasthutha|

ಮಾಧ್ಯಮ ಸಂಯೋಜಕ ಸ್ಥಾನದಿಂದ ಸಲೀಂ ವಜಾ

- Advertisement -

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಕಾಂಗ್ರೆಸ್ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ಆಡಿದ ಮಾತು ಬಹಿರಂಗವಾಗುತ್ತಿದ್ದಂತೆ ಸಲೀಂ ಅವರನ್ನು ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ವಜಾಗೊಳಿಸಲಾಗಿದೆ.


ಸಂಭಾಷಣೆ ವೇಳೆ ಮೌನವಾಗಿ ಮಾತುಗಳನ್ನು ಆಲಿಸಿದ ಉಗ್ರಪ್ಪಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯಿಂದ ನೋಟಿಸ್ ಜಾರಿಯಾಗಿದೆ.

- Advertisement -


ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತಾಡಿದ ಉಗ್ರಪ್ಪಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಕೆ ರೆಹಮಾನ್ ಖಾನ್ ನೋಟಿಸ್ ನೀಡಿದ್ದಾರೆ.

Join Whatsapp