ದೇಶದ ಸುರಕ್ಷತೆ ಬಗ್ಗೆ ಹಗುರವಾಗಿ ಮಾತನಾಡುವ ಕಾಂಗ್ರೆಸ್‌ ನಾಯಕರು ಜೈಲಿಗೆ: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಮಂಡ್ಯ: ದೇಶದ ಸುರಕ್ಷತೆ ಬಗ್ಗೆ ಹಗುರವಾಗಿ ಮಾತನಾಡುವ ಕಾಂಗ್ರೆಸ್‌ ನಾಯಕರು ಜೈಲಿಗೆ ಹೋಗುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ಧಾರೆ.

- Advertisement -


ಜನ ಸಂಕಲ್ಪ ಯಾತ್ರೆ ಯಲ್ಲಿ ಮಾತನಾಡಿದ ಅವರು, ಭಯೋತ್ಪಾದಕರ ಬಗ್ಗೆ ಅನುಕಂಪ ವ್ಯಕ್ತಪಡಿಸುವ, ಅವರಿಗೆ ಬೆಂಬಲ ನೀಡುತ್ತಿರುವ ಕಾಂಗ್ರೆಸ್‌ ಮುಖಂಡರಿಗೆ ಜೈಲು ಶಾಶ್ವತವಾದ ನೆಲೆಯಾಗಲಿದೆ. ದೇಶದ ವಿರುದ್ಧವಾಗಿ ಮಾತನಾಡುವವರಿಗೆ ಕಾನೂನು ವ್ಯವಸ್ಥೆ ತಕ್ಕ ಪಾಠ ಕಲಿಸಲಿದೆ ಎಂದು ಹೇಳಿದರು.


ಹಿಂದೆ ಕಾಂಗ್ರೆಸ್‌ ಮಾಡಿದ್ದ ತಪ್ಪಿನಿಂದಾಗಿ ಭಾರತದ ಭೂಮಿ ಚೀನಾ ಪಾಲಾಯಿತು. ಚುನಾವಣೆಗಳಲ್ಲಿ ಸೋಲುತ್ತಿರುವ ಕಾಂಗ್ರೆಸ್‌ ಮುಖಂಡರು ಚೀನಾ ಹಾಗೂ ನಮ್ಮ ಸೈನಿಕರ ನಡುವೆ ಘರ್ಷಣೆ ನಡೆದರೂ ಆ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

- Advertisement -


ಪಾಂಡವಪುರ ಶ್ರೀರಂಗಪಟ್ಟಣ ರಸ್ತೆಯಲ್ಲಿ ಬೊಮ್ಮಾಯಿ ಅವರ ಭೇಟಿಗಾಗಿ ರೈತಸಂಘದ ಸಾವಿರಾರು ರೈತರು ಸೇರಿದ್ದರು. ಆದರೆ, ಮುಖ್ಯಮಂತ್ರಿ ರೈತರನ್ನು ಭೇಟಿಯಾಗದೆ ಮುಂದೆ ಸಾಗಿದ್ದು, ಇದರಿಂದ ಕೆರಳಿದ ರೈತರು ಕಪ್ಪು ಬಟ್ಟೆ ಪ್ರದರ್ಶಿಸಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

Join Whatsapp