ಮತ್ತೋರ್ವ ಬಡ ವ್ಯಕ್ತಿಗೆ ಉಚಿತ ಶಸ್ತ್ರ ಚಿಕಿತ್ಸೆ ಮಾಡಿದ ಕಾಂಗ್ರೆಸ್ ಶಾಸಕ: ವ್ಯಾಪಕ ಮೆಚ್ಚುಗೆ

Prasthutha|

ತುಮಕೂರು: ಮತ್ತೋರ್ವ ಬಡ ವ್ಯಕ್ತಿಗೆ ಉಚಿತ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ ರಂಗನಾಥ್ ಮಾನವೀಯತೆ ಮೆರೆದಿದ್ದಾರೆ.

- Advertisement -


ಈ ಹಿಂದೆ ಜೂನ್ 27 ರಂದು ಆಶಾ ಎಂಬ ಬಡ ಮಹಿಳೆಗೆ ಸ್ವತಃ ತಾವೇ ಶಸ್ತ್ರ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದರು. ಈಗ ಮತ್ತೆ ಎರಡನೇ ಬಾರಿಗೆ ಬಡ ವ್ಯಕ್ತಿಗೆ ಉಚಿತ ಆಪರೇಷನ್ ಮಾಡಿದ್ದಾರೆ.


ಚಿಕಿತ್ಸೆಗೆ ಹಣವಿಲ್ಲದೇ ಪರದಾಡುತ್ತಿದ್ದ ವ್ಯಕ್ತಿಗೆ ಉಚಿತ ಆಪರೇಷನ್ ಮಾಡಿ ಎರಡನೇ ಬಾರಿಗೆ ಕಾಂಗ್ರೆಸ್ ಶಾಸಕ ಡಾ ರಂಗನಾಥ್ ಅವರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಯಡವಾಣಿ ಗ್ರಾಮದ ಶಿವನಂಜಯ್ಯ ಮಂಡಿ ನೋವಿನಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಹಣವಿಲ್ಲದೆ ಶಾಸಕ ಡಾ ರಂಗನಾಥ್ ಬಳಿ ಬಂದಾಗ ತಾವೇ ಮತ್ತೊಮ್ಮೆ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರ ಚಿಕಿತ್ಸೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ಶಾಸಕರ ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಡಾ ರಂಗನಾಥ್ ರ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ್ ಕೂಡ ಕೆಡಿಪಿ ಸಭೆಯಲ್ಲಿ ಶ್ಲಾಘಿಸಿದ್ದರು.

Join Whatsapp