ನೀರು ಹರಿಸದಿದ್ದರೆ ರಾಜೀನಾಮೆ: ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್

Prasthutha|

ವಿಜಯಪುರ: ನನ್ನ ಕ್ಷೇತ್ರಕ್ಕೆ ಆದಷ್ಟು ಬೇಗ ನೀರು ಹರಿಸದೆ ಹೋದಲ್ಲಿ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಯಶವಂತರಾಯೇಗೌಡ ಪಾಟೀಲ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

- Advertisement -


ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇಂಡಿ ಕ್ಷೇತ್ರದ ಸುತ್ತಮುತ್ತಲಿನ ಹಳ್ಳಿಗಳಿಗೆ ನೀರು ಇಲ್ಲದೆ ಜನರು ಹಾಗೂ ರೈತರು ಸಂಕಷ್ಟ ಪಡುತ್ತಿದ್ದಾರೆ. ಇಂಡಿ ತಾಲೂಕಿನ ಕಟ್ಟ ಕಡೆಯ ಹಳ್ಳಿಗಳಿಗೂ ಕೂಡ ನೀರು ಬಂದಿಲ್ಲ. ಕ್ಷೇತ್ರದ ಜನರು ನೀರು ಇಲ್ಲದೆ ಸಾಕಷ್ಟು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಕ್ಷೇತ್ರದ ಜನರಿಗೆ ಅನುಕೂಲ ಆಗದಿದ್ದರೆ ನಾಳೆ ರಾಜೀನಾಮೆ ನೀಡುತ್ತೇನೆ. ನಾಡಿದ್ದು ರಾಜಕೀಯದಿಂದಲೇ ನಿವೃತ್ತಿ ಆಗುತ್ತೇನೆ ಎಂದು ಹೇಳಿದ್ದಾರೆ.



Join Whatsapp